Advertisement
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು 545 ಕೋಟಿ ವೆಚ್ಚದ ಉಂಡವಾಡಿ ಕುಡಿಯುವ ನೀರು ಯೋಜನೆಯನ್ನು ಆಯವ್ಯಯದಲ್ಲೇ ಘೋಷಣೆ ಮಾಡಿಸಿ ಮಂಜೂರು ಮಾಡಿಸಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ.
Related Articles
Advertisement
ಈ ನಿಟ್ಟಿನಲ್ಲಿ ಜೆಡಿಎಸ್ ಕ್ರಮ ಕೈಗೊಳ್ಳಲಿದೆ. ಹೀಗಾಗಿ ಮೈಸೂರು ಮಹಾ ನಗರಪಾಲಿಕೆ ಅಧಿಕಾರವನ್ನಲ್ಲ, ಜವಾಬ್ದಾರಿಯನ್ನು ಕೊಡಿ ಎಂದು ಮೈಸೂರಿಗರನ್ನು ಕೇಳುತ್ತಿದ್ದೇವೆ. ಹಿಂದಿನ ಐದು ವರ್ಷ ಮೈಸೂರು ಮಹಾ ನಗರಪಾಲಿಕೆಯಲ್ಲಿ ಸಮ್ಮಿಶ್ರ ಆಡಳಿತವಿತ್ತು. ಸ್ವತಂತ್ರ ಅಧಿಕಾರವಿಲ್ಲದಿದ್ದರೆ ಅಭಿವೃದ್ಧಿ ಕಷ್ಟ ಎಂದರು.
ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ನೇಮಕಗೊಂಡ ಬೆನ್ನಲ್ಲೇ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಧಿಕಾರಿಗಳ ಸಭೆ ಮಾಡಲಾಗಿಲ್ಲ. ಚುನಾವಣೆ ಮುಗಿದ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಿಸಲಾಗುವುದು ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಸಂಪೂರ್ಣ ಬಹುಮತ ಬರುತ್ತೆ ಎಂದು ಹೋರಾಟ ಮಾಡಿದೆವು. ಆದರೆ 37 ಸ್ಥಾನಗಳು ಮಾತ್ರ ಬಂದಿದ್ದರಿಂದ ಅನಿವಾರ್ಯವಾಗಿ ಸಮ್ಮಿಶ್ರ ಸರ್ಕಾರ ರಚಿಸಬೇಕಾಯಿತು. ಚುನಾವಣಾ ಪೂರ್ವದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ನೀಡಿದ ಭರವಸೆಗಳೆಲ್ಲವನ್ನೂ ಈಡೇರಿಸಲಾಗದಿದ್ದರೂ ಕೊಟ್ಟ ಮಾತಿನಂತೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳ ಸಾಲಮನ್ನಾ ಮಾಡಿದ್ದಾರೆ ಎಂದರು.
ಹೈಕಮಾಂಡ್ ತೀರ್ಮಾನದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದು, ಮೈಸೂರು ನಗರದ ಜನತೆ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಅಚಲ ವಿಶ್ವಾಸವಿದೆ ಎಂದು ಹೇಳಿದರು.