Advertisement

ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡಿ

09:39 AM Jul 18, 2020 | Suhan S |

ತುಮಕೂರು: ಮುಂಬರುವ ದಿನಗಳಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್‌ ತಿಳಿಸಿದರು.

Advertisement

ನಗರದಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡಿ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾಗಿರುವ ಶಿಕ್ಷಕರಿಗೆ ಮಾಸ್ಕ್ ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮತದಾರರಿಗೆ ಮನವಿ ಮಾಡಿದ ಅವರು, ಒಮ್ಮೆ ಅವಕಾಶ ನೀಡಿದರೆ ಖಂಡಿತವಾಗಿಯೂ ನೊಂದ ಪದವೀಧರರು, ಶಿಕ್ಷಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ದೊರಕಿಸಲು ಶ್ರಮಿಸುತ್ತೇನೆ ಎಂದರು.

ತಾವು ಈಗಾಗಲೇ ಬಿಜೆಪಿ ಹಿಂದುಳಿದ ವರ್ಗಗಳ ಘಟದ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಬಾರಿ ಈ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಬಯಕೆ ಹೊಂದಿದ್ದೇನೆ. ಆದ್ದರಿಂದ ಕಳೆದ 6 ತಿಂಗಳಿನಿಂದ 5 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಾ ಸುಮಾರು 40 ಸಾವಿರಕ್ಕೂ ಅಧಿಕ ಪದವೀಧರರನ್ನು ಮತಪಟ್ಟಿಗೆ ನೋಂದಾಯಿಸುವ ಕೆಲಸ ಮಾಡಿದ್ದೇನೆ. ತಾವು ಸಹ ವಿದ್ಯಾಸಂಸ್ಥೆ ನಡೆಸುತ್ತಿದ್ದು ಶಿಕ್ಷಕರ ಸಮಸ್ಯೆಗಳ ಅರಿವಿದೆ. ಪದವೀಧರ ನಿರುದ್ಯೋಗಿ ಗಳಿಗೆ ಉದ್ಯೋಗ ಕಲ್ಪಿಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next