Advertisement

ಬಜೆಟ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಿ

05:04 PM Feb 12, 2022 | Team Udayavani |

ಬಾಗಲಕೋಟೆ: ರಾಜ್ಯದಲ್ಲಿ ಕೃಷಿ, ಉದ್ಯೋಗ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಮುಖಂಡ ಅಕ್ರಮ ಹಸನ್‌ ಒತ್ತಾಯಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ವಲಂತ ಸಮಸ್ಯೆಗಳು ತೀವ್ರ ಸ್ವರೂಪದಲ್ಲಿ ಕಾಡುತ್ತಿವೆ. ಅವುಗಳಿಗೆ ಪರಿಹಾರ ನೀಡುವುದರ ಜತೆಗೆ ಎಲ್ಲ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ಒದಗಿಸಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಿಎಂ
ಬಸವರಾಜ ಬೊಮ್ಮಾಯಿ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರತಿ ತಾಲೂಕುಗಳಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪಿಸಿ ಅಗತ್ಯವಿದ್ದು, ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು.

ಅಮೆರಿಕಾ ಮಾದರಿಯಲ್ಲಿ ರಾಜ್ಯದಲ್ಲಿ ಏರೋಸ್ಪೇಸ್‌ ಮತ್ತು ಏರೋನಾಟಿಕಲ್‌ ಸಂಶೋಧನಾ ಕೇಂದ್ರವನ್ನು ಟಿಪ್ಪು ಸುಲ್ತಾನ್‌ ಅವರ ಹೆಸರಿನಲ್ಲಿ ಸ್ಥಾಪಿಸಬೇಕು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ರೂ. ಮೀಸ ಲಿಡಬೇಕು. ಉರ್ದು ಭಾಷೆಗೆ ಉತ್ತೇಜನಕ್ಕಾಗಿ ಉತ್ತರ ಕರ್ನಾಟಕದಲ್ಲಿ ಉರ್ದು ವಿಶ್ವ ವಿದ್ಯಾಲಯ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ರಾಜೇಂದ್ರ ಪ್ರಸಾದ್‌ ಹಾಗೂ ಜಸ್ಟೀಸ್‌ ರಂಗನಾಥ ಮಿಶ್ರ ವರದಿ ಜಾರಿಗೆ ತರಬೇಕು. ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದವರ ಅಭಿವೃದ್ಧಿಗೆ ಒತ್ತು ನೀಡಬೇಕು. ಕೃಷಿಕರಿಗೆ ಹೆಚ್ಚಿನ ನೆರವು, ಸೌಲಭ್ಯಗಳನ್ನು ಕಲ್ಪಿಸಬೇಕು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮುಂದಾಗಬೇಕು.ಎಂದರು.

ರಾಜ್ಯದಲ್ಲಿ ಕೆಲ ದಿನಗಳಿಂದ ಹಿಜಾಬ್‌-ಕೇಸರಿ ವಿವಾದ ಭುಗಿಲೆದಿದ್ದು, ಇಂತಹ ಘಟನೆಗಳಿಂದ ಮಕ್ಕಳ ಮನಸ್ಸು ಒಡೆಯುವ ಕೆಲಸವಾಗಬಾರದು. ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಮೆರವಣಿಗೆಗೆ ಅವಕಾಶ ನೀಡಲಿಲ್ಲ. ಇದರಿಂದ ಬಿಲ್ಲವರು, ಈಡಿಗರು ಕರಾವಳಿ ಭಾಗದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಇದನ್ನು ಸಹಿಸಲು ಸಾಧ್ಯವಾಗದೆ ಜನರ
ಮನಸ್ಸು ಬೇರೆಡೆ ತಿರುಗಿಸಲು ಈ ವಿವಾದ ಹುಟ್ಟು ಹಾಕಿದ್ದಾರೆ. ದೇಶದಲ್ಲಿ ಎಲ್ಲರೂ ಒಂದಾಗಿ ಬಾಳುವ ಕೆಲಸವಾಗಬೇಕಿದೆ ಎಂದು ತಿಳಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ 50 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಪಕÒ‌ಕ್ಕಾಗಿ ದುಡಿದವರಿಗೆ ಬರುವ ಚುನಾವಣೆಯಲ್ಲಿ ಆದ್ಯತೆ ನೀಡಲಾಗುವುದು.

ಭ್ರಷ್ಟಚಾರಹಿತ, ಜನಪರ ಆಡಳಿತ ನೀಡಬೇಕು ಎನ್ನುವುದು ನಮ್ಮ ಆಶಯ ಎಂದು ಹೇಳಿದರು. ಎಸ್‌ಡಿಪಿಐ ಪಕ್ಷದ ಉಪಾಧ್ಯಕ್ಷ ಶ್ರೀನಾಥ ನವಣಿ, ಕಾರ್ಯದರ್ಶಿ ಮೊಹಮ್ಮದ್‌ ಅಂಬಿ, ಮುಖಂಡರಾದ ಕಾಶೀಮ ಕಟನಹಳ್ಳಿ, ರಾಜಭಕ್ಷ ಜಮಾದಾರ, ರಾಜೇಸಾಬ ತಾಳಿಕೋಟಿ, ಯಮನಪ್ಪ ಗುಣದಾಳ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next