Advertisement

ದೇಶಾದ್ಯಂತದ ಕಾಶ್ಮೀರಿಗಳಿಗೆ ಪೂರ್ಣ ರಕ್ಷಣೆ: ಕೇಂದ್ರ ಸರಕಾರ ಸೂಚನೆ

11:02 AM Feb 16, 2019 | udayavani editorial |

ಹೊಸದಿಲ್ಲಿ : ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮಲ್ಲಿನ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪೂರ್ಣ ರಕ್ಷಣೆ ನೀಡಬೇಕು ಎಂದು ನಿರ್ದೇಶಿಸಿದೆ.

Advertisement

ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾಭ್ಯಾಸ ನಿರತರಾಗಿರುವ ಕಾಶ್ಮೀರೀ ಯವಕರಿಗೆ ಜೀವ ಬೆದರಿಕೆ ಇದೆ ಎಂಬ ವರದಿಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯ ಈ ಸೂಚನೆಯನ್ನು ನೀಡಿದೆ. 

‘ಕಾಶ್ಮೀರಿ ವಿದ್ಯಾರ್ಥಿಗಳ ಜೀವ ರಕ್ಷಣೆ ವಿಷಯದಲ್ಲಿ ನಾವು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ. ಅಂತೆಯೇ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪೂರ್ಣ ರಕ್ಷಣೆ ನೀಡಬೇಕು ಎಂದು ಆದೇಶಿಸಿದ್ದೇವೆ’ ಎಂದು ಕೇಂದ್ರ ಗೃಹ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next