Advertisement

ಪ್ರಜ್ವಲ್‌ಗೆ ಟಿಕೆಟ್‌ ಕೊಡಲೇಬೇಕು:HDD ನಿವಾಸದ ಎದುರು ಪ್ರತಿಭಟನೆ

12:25 PM Apr 07, 2018 | |

ಬೆಂಗಳೂರು: ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ ಅವರಿಗೆ ರಾಜರಾಜೇಶ್ವರಿನಗರದ ಜೆಡಿಎಸ್‌ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ಮಾಜಿ ಪ್ರಧಾನಿ ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಲಾಗಿದೆ. 

Advertisement

ಪದ್ಮನಾಭನಗರ ನಿವಾಸದ ಎದುರು ನೂರಾರು ಮಂದಿ ಪ್ರಜ್ವಲ್‌ ಅಭಿಮಾನಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದಾರೆ. 

ದೇವೇಗೌಡ ಅವರ ಕಾರಿಗೆ ಮುತ್ತಿಗೆ ಹಾಕಿ ಘೋಷಣೆಗಳನ್ನು ಕೂಗಿದ್ದಾರೆ. ಆದರೆ ದೇವೇಗೌಡ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. 

ಪೊಲೀಸರು  ಚುನಾವಣಾ ನೀತಿ ಸಂಹಿತೆಯ ಕುರಿತು ಪ್ರತಿಭಟನಾ ನಿರತರಿಗೆ ಎಚ್ಚರಿಕೆ ನೀಡಿದರು. 

ಪೋಸ್ಟರ್‌ಗಳನ್ನುಹಿಡಿದಿದ್ದ ಜೆಡಿಎಸ್‌ ಕಾರ್ಯಕರ್ತರು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಪ್ರಜ್ವಲ್‌ಗೆ ಟಿಕೆಟ್‌ ನೀಡಿದರೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ  ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ಪ್ರಜ್ವಲ್‌ಗೆ ಜೆಡಿಎಸ್‌ ಟಿಕೆಟ್‌ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಹಲವು ದಿನಗಳಿಂದ ಜೆಡಿಎಸ್‌ನೊಳಗೆ ಹಗ್ಗಜಗ್ಗಾಟ ನಡೆಯುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next