Advertisement

Jagadish Shettar ಬದಲು ಸ್ಥಳೀಯರಿಗೆ ಟಿಕೆಟ್‌ ನೀಡಲಿ: ರಮೇಶ ಜಾರಕಿಹೊಳಿ

11:36 PM Mar 15, 2024 | Shreeram Nayak |

ಶಿವಮೊಗ್ಗ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್‌ ಬದಲು ಸ್ಥಳೀಯರಿಗೆ ಆದ್ಯತೆ ನೀಡಬೇಕು. ಸಂಜಯ್‌ ಪಾಟೀಲ್‌, ಹಾಲಿ ಸಂಸದೆ ಮಂಗಳಾ ಅಂಗಡಿ ಇದ್ದಾರೆ. ಶೆಟ್ಟರ್‌ಗೆ ಇನ್ನೂ ಟಿಕೆಟ್‌ ಅಂತಿಮ ಆಗಿಲ್ಲ. ಹೀಗಾಗಿ ಸ್ಥಳೀಯರಿಗೆ ಟಿಕೆಟ್‌ ಸಿಗುವ ವಿಶ್ವಾಸ ಇದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಈಶ್ವರಪ್ಪ ಜತೆ ಟಿಕೆಟ್‌ ಅಸಮಾಧಾನ ಕುರಿತು ಚರ್ಚಿಸಿದ್ದೇನೆ. ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಇನ್ನೂ ಸಮಯ ಮೀರಿಲ್ಲ. ಚುನಾವಣೆ ಘೋಷಣೆ ಆಗಿಲ್ಲ. ಟಿಕೆಟ್‌ ಬದಲಾವಣೆಗೆ ಅವಕಾಶ ಇದೆ. ಹೀಗಾಗಿ ನಾನು ದಿಲ್ಲಿಗೆ ಹೋಗಿ ವರಿಷ್ಠರ ಜತೆ ಚರ್ಚಿಸುತ್ತೇನೆ. ಈಶ್ವರಪ್ಪ ಅವರಿಗೆ ಪದೇಪದೆ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸಬೇಕು. ಎಲ್ಲವೂ ಸರಿ ಆಗುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.

 

 

Advertisement

Udayavani is now on Telegram. Click here to join our channel and stay updated with the latest news.

Next