Advertisement

ವೀರಶೈವ-ಲಿಂಗಾಯತರಿಗೆ ಟಿಕೆಟ್‌ ನೀಡಿ

01:30 AM Mar 01, 2019 | Team Udayavani |

ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ವೀರಶೈವ-ಲಿಂಗಾಯತರಿಗೆ ಟಿಕೆಟ್‌ ನೀಡಲು ಆಗ್ರಹಿಸಿ, ಐದಾರು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಳಿ ನಿಯೋಗ ಹೋಗಲು ತೀರ್ಮಾನಿಸಿದ್ದೇವೆಎಂದು ವೀರಶೈವ-ಲಿಂಗಾಯತ ಮುಖಂಡ, ಶಾಸಕ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

Advertisement

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾವೇರಿ ಕ್ಷೇತ್ರದಲ್ಲಿ ವೀರಶೈವ-ಲಿಂಗಾಯತರು ಬಹುಸಂಖ್ಯಾತರಾಗಿದ್ದು, ಕಾಂಗ್ರೆಸ್‌ 62 ವರ್ಷಗಳಿಂದ ವೀರಶೈವ ಲಿಂಗಾಯತರಿಗೆ ಟಿಕೆಟ್‌ ಕೊಟ್ಟಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರಾದ ಕೆಪಿಸಿಸಿ ಅಧ್ಯಕ್ಷರು, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್‌ ಸೇರಿದಂತೆ ಇನ್ನಿತರ ನಾಯಕರ ಮನವೊಲಿಸಲಾಗುವುದು. ಕ್ಷೇತ್ರದ ವೀರಶೈವ-ಲಿಂಗಾಯತ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next