Advertisement

Tamil Nadu ನಮಗೆ ಕರ್ನಾಟಕದಿಂದ ಕಾವೇರಿ ನೀರು ಕೊಡಿಸಿ

09:55 PM Oct 09, 2023 | Team Udayavani |

ಚೆನ್ನೈ:ನಮಗೆ ಅಗತ್ಯವಾಗಿ ನೀಡಬೇಕಾಗಿರುವ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂಬ ನಿರ್ಣಯವನ್ನು ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

Advertisement

ಸೋಮವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ನಿರ್ಣಯ ಮಂಡಿಸಿ ಮಾತನಾಡಿ, ಕರ್ನಾಟಕವು ನೀರು ಇಲ್ಲ ಎಂಬ ಕೃತಕ ಅಭಾವ ಸೃಷ್ಟಿಸಿ ಅದನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದೂ ಕಂಡುಬಂತು.

ಕಾವೇರಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಆಡಳಿತ ಪಕ್ಷ ಡಿಎಂಕೆ ಸದಸ್ಯರ ನಡುವೆ ಚರ್ಚೆಯ ವೇಳೆ ಬಿರುಸಿನ ಆರೋಪ ಪ್ರತ್ಯಾರೋಪಗಳೂ ನಡೆದವು. ವಿಧಾನಸಭೆಯಲ್ಲಿ ಮಂಡಿಸಲಾಗಿರುವ ನಿರ್ಣಯ ಸಮಸ್ಯೆಗೆ ಪೂರ್ಣ ಪರಿಹಾರ ಒದಗಿಸುವಂತೆ ತೋರುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next