Advertisement

ಪಿತ್ರೋಡಿ : ಹೊಳೆ ಸೇರುತ್ತಿರುವ ಮಲೀನ ತ್ಯಾಜ್ಯ , ದಡ ಸೇರುತ್ತಿದೆ ಸತ್ತ ಮೀನುಗಳು

09:42 AM Sep 22, 2021 | Team Udayavani |

ಕಟಪಾಡಿ : ಉದ್ಯಾವರ ಪಿತ್ರೋಡಿ ಭಾಗದ ಹೊಳೆಯಲ್ಲಿ ಮೀನುಗಳು ಸತ್ತಿರುವ ಸ್ಥಿತಿಯಲ್ಲಿ ದಡ ಸೇರುತ್ತಿದ್ದು, ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿರುತ್ತದೆ.

Advertisement

ಈ ಬಗ್ಗೆ ಉದ್ಯಾವರ ಗ್ರಾ.ಪಂ. ಅಧ್ಯಕ್ಷ  ರಾಧಕೃಷ್ಣ ಶ್ರೀಯಾನ್ ಅವರು ಗ್ರಾ.ಪಂ. ಸದಸ್ಯರುಗಳಾದ ಗಿರೀಶ್ ಸುವರ್ಣ, ಸಚಿನ್ ಸುವರ್ಣ ಪಿತ್ರೋಡಿ, ಹಾಗೂ ಸ್ಥಳೀಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

ಈ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಫಿಶ್ ಮೀಲ್ ಘಟಕಗಳ ಅಪಾಯಕಾರಿ ಮಲೀನ ತ್ಯಾಜ್ಯ  ಹೊಳೆಯ ನೀರನ್ನು ಸೇರುವ ಪರಿಣಾಮ ಜಲಚರ ಮೀನುಗಳ ಸತ್ತ ಸ್ಥಿತಿಯಲ್ಲಿ ಕಂಡು ಬರುತ್ತಿದ್ದು, ಮಾರಣ ಹೋಮ ನಡೆಯುತ್ತಿದೆ. ದಡಕ್ಕೆ ಸೇರುತ್ತಿರುವ ಮೀನುಗಳಿಂದಾಗಿ ಪರಿಸರದ ಜನ ತಮ್ಮ ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಫೋನ್ ಕರೆ ಮಾಡಿ ಮಾಹಿತಿಯನ್ನು ನೀಡಲಾಗಿದೆ. ಕೂಡಲೇ ಬಂದು ಪರಿಶೀಲನೆಯನ್ನು ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿಕೊಂಡಿರುವುದಾಗಿ ಉದಯವಾಣಿಗೆ ಪ್ರತಿಕ್ರಿಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next