Advertisement

Gnanavapi: ಜ್ಞಾನವಾಪಿ- ಸರ್ವೆ ತಡೆಗೆ ನಕಾರ

08:23 PM Sep 29, 2023 | Team Udayavani |

ಲಕ್ನೋ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ನಡೆಸುತ್ತಿರುವ ವೈಜ್ಞಾನಿಕ ಸಂಶೋಧನೆಗೆ ತಡೆಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಾಣಸಿಯ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

Advertisement

ಈ ಕುರಿತು ಜಿಲ್ಲಾ ಸರ್ಕಾರಿ ವಕೀಲರಾದ ರಾಜೇಶ್‌ ಮಿಶ್ರಾ ಮಾಹಿತಿ ನೀಡಿದ್ದು, ಅಂಜುಮನ್‌ ಇಂತೆಜಾಮಿಯಾ ಮಸೀದಿ ವತಿಯಿಂದ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್‌ ಅವರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಎಎಸ್‌ಐ ಸರ್ವೆಗೆ ಈಗಾಗಲೇ ಅಲಹಾಬಾದ್‌ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ಅನುಮತಿ ನೀಡಿರುವುದನ್ನು ಪರಿಗಣಿಸಿ, ಪ್ರಕರಣದಲ್ಲಿ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲವೆಂದು ತಿಳಿಸಿ, ಅರ್ಜಿ ವಜಾಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next