Advertisement

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

07:47 PM Jan 27, 2022 | Team Udayavani |

ಮೈಸೂರು : ಮೊದಲ ಸಲ ಕ್ಯಾಬಿನೆಟ್ ರಚನೆಯಾದಾಗಲೂ ನೀನು ಮಿನಿಸ್ಟರ್ ಆಗುತ್ತೀಯ ಅಂತ ಯಾರೂ ಹೇಳಲಿಲ್ಲ‌, ಎರಡನೇ ಸಲ ಯಾರೂ ಹೇಳಲಿಲ್ಲ,ಗೋಮಾತೆ ಆಶೀರ್ವಾದ ನನ್ನ ಕೈಹಿಡಿಯುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಸಂಪುಟದಲ್ಲಿ ಮುಂದುವರಿಯುವ ವಿಶ್ವಾಸವನ್ನು ಗುರುವಾರ ಹೊರಹಾಕಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರೀತಿ ನಂಬರ್ ಒನ್ ಕೆಲಸ ಯಾರೂ ಮಾಡಿಲ್ಲ‌, ಗೋ ನಿಷೇಧ ಕಾಯ್ದೆ, ಗೋ ಸಂಜೀವಿನಿ ಸೇರಿದಂತೆ ಅನೇಕ ಯೋಜನೆ ರೂಪಿಸಿದ್ದೇನೆ.ಆದರೆ ಈ ಬಾರಿ ಮಾದ್ಯಮದಲ್ಲಷ್ಟೇ ಕ್ಯಾಬಿನೆಟ್‌ನಿಂದ ಕೈ ಬಿಡ್ತಾರೆ ಅಂತ ಬರ್ತಿದೆ. ನಾನು ಪಕ್ಷದ ಶಿಸ್ತಿನ ಸಿಪಾಯಿ, 32 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ ಎಂದರು.

ಹೊರ ಜಿಲ್ಲೆಗಳ ಉಸ್ತುವಾರಿಗೆ ಅಸಮಧಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೈಕಮಾಂಡ್, ಸಿಎಂ ನಿರ್ಣಯ ಕೈಗೊಂಡೇ ಉಸ್ತುವಾರಿ ನೀಡಿದ್ದಾರೆ.
ಎಲ್ಲಿ ಹೇಳ್ತಾರೋ ಅಲ್ಲಿ ಹೋಗಿ ಕೆಲಸ ಮಾಡುತ್ತೇನೆ. ಸದ್ಯ ಯಾದಗಿರಿ ಜಿಲ್ಲೆ ಉಸ್ತುವಾರಿ ಕೊಟ್ಟಿದ್ದಾರೆ. ನಾನು ಖುಷಿಯಾಗಿದ್ದೇನೆ,ನನಗೆ ಯಾವುದೇ ಬೇಸರ ಇಲ್ಲ. ನಾನು ಕೆಲಸಗಾರ , ಎಲ್ಲಿ ಹಾಕಿದರೂ ಕೆಲಸ ಮಾಡುತ್ತೇನೆ ಎಂದರು.

ಸುತ್ತೂರು ಶ್ರೀ ಭೇಟಿ

400 ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ   ಭೇಟಿ ನೀಡಿ, ಶ್ರೀ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಅವರ ಆಶೀರ್ವಾದ ಪಡೆದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next