Advertisement

ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉತ್ಪಲ್ ಪರ್ರಿಕರ್

04:35 PM Jan 27, 2022 | Team Udayavani |

ಪಣಜಿ: ಪ್ರಸಕ್ತ ಗೋವಾ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸಲು ಪಣಜಿ ಕ್ಷೇತ್ರದಿಂದ ಉತ್ಪಲ್ ಪರ್ರಿಕರ್ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

Advertisement

ನಾಮಪತ್ರ ಸಲ್ಲಿಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಣಜಿ ಕ್ಷೇತ್ರದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಚುನಾವಣೆ ಎದುರಿಸಲಿದ್ದೇನೆ. ನನ್ನ ತಂದೆ ಮನೋಹರ್ ಪರ್ರಿಕರ್ ರವರಿಗೆ ಪಣಜಿಯ ಜನತೆ ಇಷ್ಟು ವರ್ಷಗಳ ಕಾಲ ಬಹುಮತ ನೀಡಿ ಆಯ್ಕೆ ಮಾಡಿದ್ದರು, ಕಾರಣ ಅವರಲ್ಲಿ ಕೆಲವು ಮೌಲ್ಯಗಳಿದ್ದವು. ನನ್ನಲ್ಲಿಯೂ ಕೆಲ ಮೌಲ್ಯಗಳಿವೆ. ಪಣಜಿ ಜನತೆ ನನ್ನೊಂದಿಗಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಉತ್ಪಲ್ ಪರಿಕ್ಕರ್ ನುಡಿದರು.

ಉತ್ಪಲ್ ಪರ್ರಿಕ ರ್  ಬೆಳಿಗ್ಗೆ ಪಣಜಿಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಿದರು.

ಪಣಜಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಫರ್ಧಿಸಲು ಉತ್ಪಲ್ ಪರ್ರಿಕರ್ ಉತ್ಸುಕರಾಗಿದ್ದರು. ಆದರೆ ಬಿಜೆಪಿಯು ಪಣಜಿ ಕ್ಷೇತ್ರದ ಹಾಲಿ ಶಾಸಕ ಬಾಬೂಶ್ ಮೊನ್ಸೆರಾತ್ ರವರಿಗೆ ಟಿಕೆಟ್ ನೀಡಿದ್ದರಿಂದ ಉತ್ಪಲ್ ಪರ್ರಿಕರ್ ಇದೇ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ದೇಶದ ಮಾಜಿ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಪುತ್ರನಿಗೆ ಬಿಜೆಪಿ ಟಿಕೇಟ್ ನೀಡದಿರುವುದು ಮಾತ್ರ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ವಿವಿಧ ರಾಜಕೀಯ ಪಕ್ಷಗಳಂತೂ ಇದೇ ವಿಷಯವನ್ನು ತಮ್ಮ ಅಸ್ತ್ರವಾಗಿಸಿಕೊಂಡಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next