Advertisement

ಕರ್ನಾಟಕದ ಫಲಿತಾಂಶ ಬಿಜೆಪಿಗೆ ಪಾಠವಾಗಿದೆ: ಯೂರಿ ಅಲೆಮಾವೋ

04:45 PM May 14, 2023 | Team Udayavani |

ಪಣಜಿ: ಕರ್ನಾಟಕ ಚುನಾವಣಾ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ನಂತರ ಗೋವಾದ ಕಾಂಗ್ರೆಸ್ ನಾಯಕರು ವಿವಿಧ ಪ್ರತಿಕ್ರಿಯೆ ನೀಡಲು ಪ್ರಾರಂಭಿಸಿದ್ದಾರೆ.

Advertisement

ರಾಜಕೀಯಕ್ಕೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಕಾಂಗ್ರೆಸ್ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಗೋವಾ ರಾಜ್ಯ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೋ ಹೇಳಿದ್ದಾರೆ.

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಮುಂಚೂಣಿಯಲ್ಲಿರಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಮಾತನಾಡಿದ ಯೂರಿ ಅಲೆಮಾವೋ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ದೇಶದಲ್ಲಿ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರವು ಪ್ರತಿ ಮನೆಯ ಬಜೆಟ್ ನ್ನು ಕಡಿತಗೊಳಿಸಿದೆ. ಈವೆಂಟ್ ಮ್ಯಾನೇಜ್ಮೆಂಟ್ ಮತ್ತು ಪ್ರಚಾರಕ್ಕಾಗಿ ಹಪಹಪಿಸುತ್ತಿದ್ದ ಬಿಜೆಪಿಗೆ ಇದು ಪಾಠವಾಗಿದೆ ಎಂದು ಯೂರಿ ಅಲೆಮಾಂವ ಹೇಳಿದರು.

ಇತ್ತೀಚೆಗೆ ಬಿಡುಗಡೆಯಾದ ದಿ ಕೇರಳ ಸ್ಟೋರಿ ಸಿನಿಮಾವನ್ನು ಉಲ್ಲೇಖಿಸಿ ಅವರು ಆಡಳಿತ ಪಕ್ಷವನ್ನು ಟೀಕಿಸಿದ್ದರು.

Advertisement

ಇಂಥ ಕಥಾವಸ್ತುವನ್ನು ಆಧರಿಸಿದ ಸಿನಿಮಾಗಳನ್ನು ನೋಡುವುದಕ್ಕಿಂತ ಜನರ ಸಂಕಷ್ಟಗಳತ್ತ ಗಮನ ಹರಿಸುವುದು ಮುಖ್ಯ ಎಂಬುದನ್ನು ಕರ್ನಾಟಕದ ಫಲಿತಾಂಶಗಳು ತೋರಿಸಿವೆ ಎಂದು ಅಲೆಮಾಂವ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next