Advertisement
ಪಾರೀಕರ್ ಜತೆಗೆ ಇತರ 9 ಮಂದಿ ಸಚಿವರಿಗೂ ರಾಜ್ಯಪಾಲ ರಾದ ಮೃದುಲಾ ಸಿನ್ಹಾ ಪ್ರಮಾಣ ವಚನ ಬೋಧಿಸಿದ್ದಾರೆ. ಇದಕ್ಕೂ ಮೊದಲು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ ಕಾಂಗ್ರೆಸ್ಗೆ ಅಲ್ಲೂ ಹಿನ್ನಡೆಯಾಗಿತ್ತು.
Related Articles
Advertisement
ಮಣಿಪುರದಲ್ಲೂ ಬಿಜೆಪಿ ಸರಕಾರ?ಗೋವಾದಲ್ಲಿ ಸರಕಾರ ರಚಿಸಲು ಬಿಜೆಪಿ ಯಶಸ್ವಿಯಾಗುತ್ತಿದ್ದಂತೆಯೇ ಅತ್ತ ಮಣಿಪುರದಲ್ಲೂ ಕಾಂಗ್ರೆಸ್ಗೆ ಸೋಲಾಗಿದೆ. ಬಿಜೆಪಿಯು ತನಗೆ ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡ ಹಿನ್ನೆಲೆಯಲ್ಲಿ ಮಣಿಪುರ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲಾ ಅವರು ಸರಕಾರ ರಚನೆಗೆ ಆಹ್ವಾನಿಸಿದ್ದಾರೆ. ಅದರಂತೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಅವರು ಬುಧವಾರ ಅಪರಾಹ್ನ 1 ಗಂಟೆಗೆ ಮಣಿಪುರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜಭವನದ ಪ್ರಕಟನೆ ತಿಳಿಸಿದೆ. ಈ ಬೆಳವಣಿಗೆಯಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್, “ರಾಜ್ಯಪಾಲರು ಗಳು ಕೇಂದ್ರ ಸರಕಾರದ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರವು ರಾಜ್ಯಪಾಲರ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ,’ ಎಂದು ಆರೋಪಿಸಿದೆ. ಜತೆಗೆ, ಬಿಜೆಪಿಯು ಹಣದ ಬಲದಿಂದ ಅಧಿಕಾರ ಹಿಡಿಯುತ್ತಿದೆ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಹೇಳಿದ್ದಾರೆ. ಪ್ರಮಾಣ ಸ್ವೀಕರಿಸಿದ ಮನೋಹರ್ ಪಾರೀಕರ್ ಹಾಗೂ ತಂಡಕ್ಕೆ ನನ್ನ ಅಭಿನಂದನೆಗಳು. ಗೋವಾವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವಂತಾಗಲಿ ಎಂದು ಹಾರೈಸುತ್ತೇನೆ.
ನರೇಂದ್ರ ಮೋದಿ, ಪ್ರಧಾನಿ ಧನ ಬಲ ಪ್ರಯೋಗಿಸಿ, ಪ್ರಜಾಸತ್ತೆಯನ್ನು ದುರ್ಬಲಗೊಳಿಸಲಾಗುತ್ತಿದೆ. ಗೋವಾ, ಮಣಿಪುರದ ಜನರ ತೀರ್ಪನ್ನೇ ಬಿಜೆಪಿ ಕದ್ದಿದೆ. ಗೋವಾ ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸಿದ್ದಾರೆ.
ರಾಹುಲ್ ಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ