Advertisement

ರಾಜ್ಯದ :ಪ್ರತಿ ನಾಗರೀಕರಿಗೂ ಸರ್ಕಾರಿ ಯೋಜನೆಗಳ ಲಾಭ ದೊರಕಿಸಿಕೊಡಲಾಗುವುದು: ಪ್ರಮೋದ್ ಸಾವಂತ್

03:38 PM Oct 02, 2021 | Team Udayavani |

ಪಣಜಿ: ಸ್ವಯಂಪೂರ್ಣಗೋವಾ ಇದು ಕಳೆದ ಒಂದು ವರ್ಷಗಳ ಹಿಂದೆ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಒಂದು ಯೋಜನೆಯಾಗಿದ್ದು, ಈ ಯೋಜನೆಯನ್ನು ಇನ್ನೂ 5 ವರ್ಷಗಳ ಕಾಲ ಮುಂದುವರೆಸಿಕೊಂಡು ಹೋಗಿ ರಾಜ್ಯದಲ್ಲಿನ ಪ್ರತಿಯೊಬ್ಬ ನಾಗರೀಕರಿಗೂ ಸರ್ಕಾರಿ ಯೋಜನೆಗಳ ಲಾಭ ದೊರಕಿಸಿಕೊಡಲಾಗುವುದು. ಕಳೆದ ಒಂದು ವರ್ಷಗಳ ಅವಧಿಯಲ್ಲಿ ಸ್ವಯಂಪೂರ್ಣಗೋವಾ ಅಡಿಯಲ್ಲಿ 1492 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದರು.

Advertisement

ವೀಡಿಯೋ ಕಾನ್ಫರೆನ್ಸ್ ಮೂಲಕ  ರಾಜ್ಯದಲ್ಲಿನ ಸ್ವಯಂಪೂರ್ಣ ಮಿತ್ರ ಹಾಗೂ ಪಂಚಾಯತ್ ಅಧ್ಯಕ್ಷರೊಂದಿಗೆ ಮುಖ್ಯಮಂತ್ರಿ ಸಾವಂತ್ ಮಾತನಾಡಿದರು.

ಸ್ವಯಂಪೂರ್ಣ ಮಿತ್ರ ಯೋಜನೆಯ ಅಡಿಯಲ್ಲಿ ಸರ್ಕಾರದ ಗೆಜೆಟೆಡ್ ಅಧಿಕಾರಿಗಳು ಪ್ರತಿ ಶನಿವಾರ ಪಂಚಾಯತಿಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ಜನತೆಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಪ್ರತಿಯೊಬ್ಬ ನಾಗರೀಕರೂ ಸ್ವಯಂಪೂರ್ಣರಾಗಬೇಕು ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next