Advertisement

ಪ್ರತಿಪಕ್ಷದವರು ರೌಡಿಗಳಂತೆ ವರ್ತಿಸಿದ್ದಾರೆ : ಸಿಎಂ ಪ್ರಮೋದ್ ಸಾವಂತ್

06:41 PM Jul 31, 2021 | Team Udayavani |

ಪಣಜಿ: ಪ್ರತಿಪಕ್ಷದ ಇಬ್ಬರು ಶಾಸಕರು ಸದನದಲ್ಲಿ ರೌಡಿಗಳಂತೆ ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಟೀಕಿಸಿದರು.

Advertisement

ಮೂರು ದಿನಗಳ ಮಳೆಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ ಮಾಧ್ಯಮಗಳ ಎದುರು ಪ್ರತಿಪಕ್ಷದ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಮುಖ್ಯಮಂತ್ರಿಗಳು, ಇಂದು ಅಧಿವೇಶನದಲ್ಲಿ ಹಲವು ಜನಪರ ಮಸೂದೆಗಳನ್ನು ಅಂಗೀಕರಿಸಲಾಗಿದೆ. ನಮ್ಮ ಸರ್ಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮತ್ತು ನೀತಿಗಳ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷಗಳು ನಿರಾಶೆಗೊಂಡಿವೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಟೀಕಿಸಿದರು.

ಅಧಿವೇಶನದಲ್ಲಿ ಸರ್ಕಾರ ವಿವಿಧ ಮಸೂದೆಗಳನ್ನು ಅಂಗೀಕರಿಸಿದ ಸಂದರ್ಭದಲ್ಲಿ ಸದನದ ಬಾವಿಗಿಳಿದು ಪ್ರತಿಭಟಿಸಿದ ವಿರೋಧ ಪಕ್ಷದ ಶಾಸಕರ ನಂಡತೆಯನ್ನು ಮುಖ್ಯಮಂತ್ರಿ ಸಾವಂತ್ ರೌಡಿ ನಡವಳಿಕೆ ಎಂದು ಉಲ್ಲೇಖ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next