Advertisement

ಲಿಫ್ಟ್‌ನಲ್ಲಿ ಸಿಲುಕಿದ ಗೋವಾ ಸಿಎಂ!

08:59 PM Apr 04, 2024 | Team Udayavani |

ಮಂಡ್ಯ: ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಅವರು ಲಿಫ್ಟ್ ನಲ್ಲಿ ಸಿಲುಕಿದ ಪ್ರಸಂಗ ನಡೆಯಿತು.

Advertisement

ನಗರದ ಹೊರ ವಲಯದ ಅಮರಾವತಿ ಹೊಟೇಲ್‌ನಲ್ಲಿ ಪ್ರಮೋದ್‌ ಸಾವಂತ್‌ ಹಾಗೂ ಇತರ ಗಣ್ಯರಿದ್ದ ಲಿಫ್ಟ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು, ಸ್ವಲ್ಪ ಹೊತ್ತು ಆತಂಕದ ವಾತಾವರಣ ಉಂಟಾಯಿತು. ಬೆಳಗ್ಗೆ 11 ಗಂಟೆ ಸುಮಾರಿಗೆ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಠಿ ಮುಗಿಸಿ  ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಕೆಗೆ ತೆರಳುವಾಗ ಹೆಚ್ಚು ಜನರು ಲಿಫ್ಟ್‌ ಏರಿದ ಪರಿಣಾಮ ಅರ್ಧದಲ್ಲೇ ಲಿಫ್ಟ್‌ ನಿಂತಿತು. ಇದರ ಪರಿಣಾಮ ಸ್ಥಳದಲ್ಲಿ ಆತಂಕ, ಗೊಂದಲ ಸೃಷ್ಟಿಯಾಯಿತು. ಬಳಿಕ  ತಾಂತ್ರಿಕ ಸಿಬಂದಿ ಆಗಮಿಸಿ  ಬಾಗಿಲು ತೆರೆದು ಒಳಗಿದ್ದವರನ್ನು ಹೊರಗೆ ತಂದರು.

Advertisement

Udayavani is now on Telegram. Click here to join our channel and stay updated with the latest news.

Next