Advertisement

ಗೋವಾದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಿಎಂ ವಿಫಲ : ದಿನೇಶ್ ಗುಂಡೂರಾವ್

03:53 PM Aug 05, 2021 | Team Udayavani |

ಪಣಜಿ : ಕಾಂಗ್ರೇಸ್  ಪಕ್ಷವು ಗೋವಾದ ಪ್ರತಿಯೊಂದು ಸಮಸ್ಯೆಯ ಬಗ್ಗೆ ಆಕ್ರಮಣ ನಡೆಸಲಿದೆ. ಮುಖ್ಯಮಂತ್ರಿಗಳು ಗೋವಾದ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ

Advertisement

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಅಧಿವೇಶನದಲ್ಲಿ ಮಂಜೂರಿಗೊಳಿಸಿದ ವಿಧೇಯಕಕ್ಕೆ ಪ್ರತಿಪಕ್ಷಗಳು ಆಕ್ಷೇಪವೆತ್ತಿವೆ. ಯಾವುದೇ ಪರಿಸ್ಥಿತಿಯಲ್ಲೂ ಈ ವಿದೇಯಕಗಳನ್ನು ಮಾನ್ಯಗೊಳಿಸಲು ಸಾಧ್ಯವಿಲ್ಲ. ಗೋವಾ ಕಾಂಗ್ರೆಸ್ ಪ್ರದೇಶಾಧ್ಯಕ್ಷರ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.

ದಿನೇಶ್ ಗುಂಡೂರಾವ್ ಬೆಂಗಳೂರಿಗೆ ವಾಪಸ್

ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಗೋವಾದಲ್ಲಿ ಪಕ್ಷದ ಬಲವರ್ಧನೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

ಇಷ್ಟೇ ಅಲ್ಲದೆಯೇ ಗೋವಾದ ವಿವಿಧ ಮತಕ್ಷೇತ್ರಗಳಲ್ಲಿ  ಪಕ್ಷದ ಕಾರ್ಯಕರ್ತರ ಬೈಠಕ್ ಆಯೋಜಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ವಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ಧುಗೊಳಿಸಿ ಇಂದು(ಗುರುವಾರ, ಆಗಸ್ಟ್ 5) ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

Advertisement

ಇದನ್ನೂ ಓದಿ : ಮಾನಸಿಕ ಆರೋಗ್ಯ ಸುಧಾರಣೆಗಾಗಿ ಇಂಗ್ಲೆಂಡ್ ಸರಣಿಯಿಂದ ಹೊರಗುಳಿದ ಕಿವೀಸ್ ಆಲ್ ರೌಂಡರ್

Advertisement

Udayavani is now on Telegram. Click here to join our channel and stay updated with the latest news.

Next