Advertisement

ಕಾಣಕೋಣದ ಶ್ರೀ ಪರ್ತಗಾಳಿ ಮಠಕ್ಕೆ ಭೇಟಿ ನೀಡಿದ ಗೋವಾ ರಾಜ್ಯಪಾಲ

10:07 PM Jul 21, 2021 | Team Udayavani |

ಪಣಜಿ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರು ಬುಧವಾರ ಕಾಣಕೋಣದ ಶ್ರೀ ಪರ್ತಗಾಳಿ ಮಠಕ್ಕೆ ಭೇಟಿ ನೀಡಿ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ್ ಸ್ವಾಮೀಜಿಯವರ ಪಟ್ಟದ ಶಿಷ್ಯರಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಸ್ವಾಮೀಜಿಯವರು ಶಿವಪಾದ ಸೇರಿರುವ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು.

Advertisement

ಶ್ರೀಮದ್ ವಿದ್ಯಾಧಿರಾಜ ತೀರ್ಥರು ಆಧ್ಯಾತ್ಮಿಕ ಉನ್ನತಿಗಾಗಿ ದಣಿವಿಲ್ಲದೆಯೇ ಕೆಲಸ ಮಾಡಿದವರು. ಶಿಕ್ಷಣ, ಆರೋಗ್ಯ, ಸೇರಿದಂತೆ ಅಗತ್ಯವಿರುವವರಿಗೆ ಸೇವೆಯ ಮೂಲಕ ಮಾನವೀಯತೆಯನ್ನು ಮೆರೆದವರು ಎಂದು ರಾಜ್ಯಪಾಲರು ತೀವ್ರ ದುಃಖ ವ್ಯಕ್ತಪಡಿಸಿದರು.

ಬಳಿಕ ರಾಜ್ಯಪಾಲರು ಶ್ರೀಗಳ ಸಮಾಧಿ ಬಳಿ ತೆರಳಿ ನಮನ ಸಲ್ಲಿಸಿದರು.

ಇದನ್ನೂ ಓದಿ :ಹಕ್ಕಿಜ್ವರಕ್ಕೆ ದೇಶದಲ್ಲಿ ಮೊದಲ ಸಾವು :ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ

Advertisement

Udayavani is now on Telegram. Click here to join our channel and stay updated with the latest news.

Next