Advertisement

ನಿರ್ಬಂಧವಿಲ್ಲದೆ ಪ್ರವಾಸೋದ್ಯಮ ಆರಂಭಿಸಿದ್ದರಿಂದ ಸೋಂಕು ಹೆಚ್ಚಳವಾಗಿದೆ: ವಿಶ್ವಜಿತ್ ರಾಣೆ

07:30 PM May 08, 2021 | Team Udayavani |

ಪಣಜಿ: ಗೋವಾದಲ್ಲಿ ಕಳೆದ ಡಿಸೆಂಬರ್ನಿಂದ ಯಾವುದೇ ನಿರ್ಬಂಧವಿಲ್ಲದೆಯೇ ಪ್ರವಾಸೋದ್ಯಮವನ್ನು ಆರಂಭಿಸಿರುವುದು ರಾಜ್ಯದ ಸಧ್ಯದ ಪರಿಸ್ಥಿತಿಗೆ ಕಾರಣವಾಗಿದೆ ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್ ರಾಣೆ ಹೇಳಿದರು.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ  ರಾಜ್ಯದಲ್ಲಿ ಶೇ 51 ರಷ್ಟು ಕೋವಿಡ್ ಪಾಜಿಟಿವಿಟಿ ಪ್ರಮಾಣವಿದೆ, ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್ ರಾಣೆ ಹೇಳಿದರು.

ಇದನ್ನೂ ಓದಿ :ಕೋವಿಡ್ ವಾರ್ಡ್ ನಲ್ಲಿ ಗಂಟೆಗಟ್ಟಲೇ ಇರಿಸಿದ ಶವ : ಸೋಂಕಿತರಲ್ಲಿ ಆತಂಕ

ಡಿಸೆಂಬರ್, ಜನವರಿ ಮತ್ತು ಫೆಬ್ರುವರಿಯಲ್ಲಿ ರಾಜ್ಯದಲ್ಲಿ ಯಾವುದೇ ನಿರ್ಬಂಧವಿಲ್ಲದೆಯೇ ಪ್ರವಾಸೋದ್ಯಮ ಆರಂಭಿಸಿದ್ದರಿಂದ ರಾಜ್ಯದಲ್ಲಿ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡಲು ಕಾರಣವಾಗಿದೆ. ಗೋವಾ ರಾಜ್ಯವು ಪ್ರಸಿದ್ಧ ಪ್ರವಾಸಿ ತಾಣವಾಗಿರುವುದರಿಂದ ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ವಿವಿಧ ರಾಜ್ಯಗಳಿಂದ ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ನಾವು ಅಂದೇ ಈ ಕುರಿತು ಆರೋಗ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆವು, ಏಕೆಂದರೆ ನಾವು ಮುಂದಿನ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು ಎಂದು. ಇಂದು ಗೋವಾದಲ್ಲಿ ದೇಶದಲ್ಲಿಯೇ ಹೆಚ್ಚು ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಮಂತ್ರಿ ವಿಶ್ವಜಿತ್ ರಾಣೆ ಆತಂಕ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next