Advertisement

ಕನ್ನಡ ಭವನ ನಿರ್ಮಾಣ: ಗೋವಾ ಕನ್ನಡ ಮಹಾಸಂಘ ಸಂತಸ

04:50 PM Mar 04, 2022 | Team Udayavani |

ಪಣಜಿ: ಹೊರ ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್‍ನಲ್ಲಿ “ಗೋವಾದಲ್ಲಿ ಕನ್ನಡ ಭವನ ನಿರ್ಮಾಣ” ಮಾಡುವ ಘೋಷಣೆ ಮಾಡಿದ್ದಾರೆ.

Advertisement

ಗೋವಾ ರಾಜ್ಯದ ಕನ್ನಡಿಗರ ಬಹು ವರ್ಷಗಳ ಕನ್ನಡ ಭವನ ನಿರ್ಮಾಣದ ಕನಸು ನನಸಾಗುವ ನಿಟ್ಟಿನಲ್ಲಿ ಇದೀಗ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಕಳೆದ ಸುಮಾರು ಮೂರು ತಿಂಗಳ ಹಿಂದಷ್ಟೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ರವರನ್ನು ಅಖಿಲ ಗೋವಾ ಕನ್ನಡ ಮಹಾಸಂಘದ ಮತ್ತು ಗೋವಾದ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಸಂದರ್ಭದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ ನೀಡುವುದಾಗಿ ಘೋಷಿಸಿದ್ದರು.

ಇದೀಗ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಗೋವಾ ಕನ್ನಡ ಭವನ ನಿರ್ಮಾಣ ಮಾಡುವುದನ್ನು ಅಧೀಕೃತವಾಗಿ ಘೋಷಿಸಿದ್ದಾರೆ. ಇದರಿಂದಾಗಿ ಗೋವಾದ ಕನ್ನಡಿಗರ ಬಹು ವರ್ಷಗಳ ಬೇಡಿಕೆ ಈಡೇರುವ ಸಾಧ್ಯತೆಯಿದೆ.

ಈ ಕುರಿತು ಅಖಿಲ ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೋವಾ ಘಟಕದ ಅಧ್ಯಕ್ಷ ಸಿದ್ಧಣ್ಣ ಮೇಟಿ ಪ್ರತಿಕ್ರಿಯೆ ನೀಡಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ತಮ್ಮ ಬಜೆಟ್‍ನಲ್ಲಿ ಘೋಷಿಸಿರುವುದಕ್ಕೆ ಗೋವಾ ಕನ್ನಡಿಗರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ. ಈ ಮೂಲಕ ಶೀಘ್ರವಾಗಿ ಗೋವಾ ಕನ್ನಡಿಗರ ಕನಸು ನನಸಾಗಲಿ ಎಂದು ಆಶಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next