Advertisement

ಗೋವಾದಲ್ಲಿ ರಾಜಕೀಯ ಸ್ವರೂಪ ಪಡೆಯುತ್ತಿದೆ ಕಾಂಗ್ರೆಸ್ ಶಾಸಕರ ಬಂಡಾಯ : ದಿಗಂಬರ್ ಕಾಮತ್

05:16 PM Jul 13, 2022 | Team Udayavani |

ಪಣಜಿ : ಸದ್ಯ ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯವೇ ದೊಡ್ಡ ರಾಜಕೀಯ ಸ್ವರೂಪ ಪಡೆಯುತ್ತಿದೆ. ಮಡಗಾಂವ್ ಶಾಸಕ ಹಾಗೂ ಹಿರಿಯ ಕಾಂಗ್ರೇಸ್ ಮುಖಂಡ ದಿಗಂಬರ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2017ರಲ್ಲಿ ಇತರ ಶಾಸಕರು ಕಾಂಗ್ರೆಸ್ ತೊರೆದ ನಂತರವೂ ನಾವು ಕೊನೆಯವರೆಗೂ ಪಕ್ಷದಲ್ಲೇ ಇದ್ದೇವೆ, ಆದರೆ ಪಕ್ಷದಿಂದ ನಮಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಗೋವಾದಲ್ಲಿ 2017ರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ ಪಕ್ಷ ನಮಗೆ ಸರ್ಕಾರ ರಚಿಸಲು ಅವಕಾಶ ನೀಡಲಿಲ್ಲ. ಹಾಗಾಗಿ ಅಂದು ಗೋವಾದಲ್ಲಿ ಅಧಿಕಾರ ಸ್ಥಾಪಿಸುವ ಅವಕಾಶದಿಂದ ವಂಚಿತರಾದೆವು. ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ನಂತರ 2022ರ ವಿಧಾನಸಭೆ ಚುನಾವಣೆವರೆಗೂ ನಾನೊಬ್ಬನೇ ಕಾಂಗ್ರೆಸ್ ಶಾಸಕನಾಗಿದ್ದೆ ಆದರೆ ಸದ್ಯ ಪಕ್ಷ ತನ್ನನ್ನು ನಿರ್ಲಕ್ಷಿಸುತ್ತಿದೆ ಎಂದು ದಿಗಂಬರ ಕಾಮತ್ ಬೇಸರ ಹೊರಹಾಕಿದರು.

ನಾನು ಪಕ್ಷ ವಿರೋಧಿ ಕ್ರಮ ಕೈಗೊಂಡು ಬಿಜೆಪಿ ಸೇರಲಿದ್ದೇನೆ  ಎಂಬ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿತ್ತು. ನನ್ನ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಅನರ್ಹತೆ ಅರ್ಜಿಯನ್ನು ವಿಧಾನ ಸಭೆಯ ಸಭಾಧ್ಯಕ್ಷರಿಗೆ ಸಲ್ಲಿಸಲಾಯಿತು. ಇಲ್ಲಿಯವರೆಗೂ ಪಕ್ಷಕ್ಕಾಗಿ ನಾನು ಪಟ್ಟ  ಶ್ರಮಕ್ಕೆ ಪಕ್ಷದಲ್ಲಿ ಬೆಲೆ ಇಲ್ಲದಂತಾಗಿದೆ ಎಂದು ದಿಗಂಬರ ಕಾಮತ್ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿ ಎರಡು ಬಸ್‌-ಗೂಡ್ಸ್‌ ಲಾರಿಗಳ ನಡುವೆ ಢಿಕ್ಕಿ

ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ : ತಾನಾವಾಡೆ ಸ್ಪಷ್ಟನೆ
ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಬಂಡಾಯ ಅವರ  ಪಕ್ಷದ ಆಂತರಿಕ ವಿಚಾರ. ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತಾನಾವಾಡೆ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಒಡೆಯಬೇಕು ಎಂದಿದ್ದರೆ ಮಿಷನ್ ಕಮಲ ಅರ್ಧಕ್ಕೆ ಬಿಡುವುದಿಲ್ಲ ಎಂದು ಹೇಳಿದ ಅವರು,  ಗೋವಾದ ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯ ಕೈವಾಡವಿಲ್ಲ ಎಂದು ಕಿಡಿಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next