Advertisement

ಗೌರಿಬಿದನೂರು ಸುತ್ತಮುತ್ತ ಭಾರಿ ಮಳೆ : ಕೆರೆಕಟ್ಟೆ ಒಡೆದು ನೂರಾರು ಎಕರೆ ಕೃಷಿ ಭೂಮಿ ಜಲಾವೃತ

12:33 PM Oct 17, 2022 | Team Udayavani |

ಗೌರಿಬಿದನೂರು : ಗೌರಿಬಿದನೂರು ತಾಲೂಕಿನಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ಸತತ ಮಳೆಯಿಂದಾಗಿ ಹೊಸೂರು ಹೋಬಳಿಯ ಕೆಂಕರೆ ಗ್ರಾಮದ ಕೆರೆ ಕಟ್ಟೆ ಒಡೆದು ಹೋಗಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ನೀರು ಪಾಲಾಗಿದೆ.

Advertisement

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಈ ಕೆರೆಯು 186 ಅಚ್ಚುಕಟ್ಟೆ ಹೊಂದಿದ್ದು ಇತ್ತೀಚೆಗೆ ಸುರಿದ ಮಳೆಯಿಂದ ಕೆರೆಯ ಕಟ್ಟೆ ಒಡೆದುಹೋಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಬಹುತೇಕ ಕೆರೆಕುಂಟೆಗಳು ಭರ್ತಿಯಾಗಿ ಅಪಾಯದ ಮಟ್ಟಕ್ಕೆ ತಲುಪಿದೆ ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷದಿಂದ ಗೌರಿಬಿದನೂರು ತಾಲೂಕಿನಲ್ಲಿ ಕೆರೆಯ ಕಟ್ಟೆಯ ಒಡೆದು ಹೋಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ವಿಜಯಪುರ ಪಾಲಿಕೆ ಚುನಾವಣೆ: ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ

Advertisement

Udayavani is now on Telegram. Click here to join our channel and stay updated with the latest news.

Next