Advertisement

ದೇವರು ನಿಮ್ಮನ್ನು ಮೆಚ್ಚುತ್ತಾನಾ? ರೈತರಿಗೆ ಎಚ್.ಡಿ. ಕುಮಾರಸ್ವಾಮಿ

03:18 PM Apr 09, 2018 | Team Udayavani |

ಬೆಳಗಾವಿ: ಮತವನ್ನು ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷಕ್ಕೆ ಹಾಕಿ, ನನಗೆ ಸಾಲ ಮನ್ನಾ ಮಾಡಿ ಅಂದ್ರೆ ದೇವರು ನಿಮ್ಮನ್ನು ಮೆಚ್ಚುತ್ತಾನಾ? ಇದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ.

Advertisement

ಬೆಳಗಾವಿ ಅಥಣಿ ಪಟ್ಟಣದಲ್ಲಿ ವಿಕಾಸಪರ್ವ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಬಳಿ ಬಹಳಷ್ಟು ಮಂದಿ ರೈತರು ಸಾಲಮನ್ನಾ ಮಾಡಿ ಅಂತ ಕೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಥವಾ ಬಿಜೆಪಿಗೆ ಮತ ಹಾಕಿದ್ರೆ ಏನು ಮಾಡಲು ಸಾಧ್ಯ ಎಂದರು.

ರೈತರ ಸಾಲಮನ್ನಾ ಮಾಡುವ ಇಂಗಿತವನ್ನು ನಾನು ಹೊಂದಿದ್ದೇನೆ. ಅದಕ್ಕಾಗಿ ನೀವು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಆಗ ಸಾಲಮನ್ನಾ ಮಾಡಲು ಸಾಧ್ಯ ಎಂದು ಕುಮಾರಸ್ವಾಮಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next