Advertisement

ಕೈ ಕೊಟ್ಟ ಅಭ್ಯರ್ಥಿ ; ದೇವರು ಒಳ್ಳೆಯದು ಮಾಡಲಿ ಎಂದ ಯಡಿಯೂರಪ್ಪ 

12:10 PM Nov 01, 2018 | |

ಶಿಕಾರಿಪುರ: ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್‌. ಚಂದ್ರಶೇಖರ್‌ ಕೊನೇ ಕ್ಷಣದಲ್ಲಿ  ಪಕ್ಷಕ್ಕೆ ಕೈ ಕೊಟ್ಟು  ಕಾಂಗ್ರೆಸ್‌ ಪಾಳಯಕ್ಕೆ ಜಿಗಿದ ವಿದ್ಯಮಾನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು  ತೀವ್ರವಾಗಿ ಕೆರಳಿಸಿದೆ. 

Advertisement

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ ‘ಬಿಜೆಪಿ ಅಭ್ಯರ್ಥಿಯಾಗಿದ್ದ ಚಂದ್ರಶೇಖರ್‌ ಅವರನ್ನು ಡಿ.ಕೆ.ಶಿವಕುಮಾರ್‌ ಅವರು ದುಡ್ಡು ಕೊಟ್ಟು ಖರೀದಿ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಆಕ್ರೋಶದಿಂದ ನುಡಿದರು.

ಹೆಚ್ಚಿನ ಪ್ರತಿಕ್ರಿಯೆ ನೀಡಲು ಮುಂದಾಗದ ಅವರು ಮೈಕ್‌ ತಳ್ಳಿಕೊಂಡು ಮುಂದಕ್ಕೆ ಸಾಗಿದರು. 

ಯಡಿಯೂರಪ್ಪ ಅವರು ಭಾರೀ ಶಾಕ್‌ನ ನಡುವೆಯೇ ಶಿಕಾರಿಪುರದಲ್ಲಿ ಪುತ್ರ  ಬಿ.ವೈ.ರಾಘವೇಂದ್ರ ಪರ ಭರ್ಜರಿ ರೋಡ್‌ ಶೋ ನಡೆಸಿ ಮತ ಯಾಚನೆ ಮಾಡುತ್ತಿದ್ದಾರೆ. 

ಗುರುವಾರ ಬೆಳಗ್ಗೆ ಸಂಸದ ಡಿ.ಕೆ.ಸುರೇಶ್‌ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ  ಬಿಜೆಪಿ ಅಭ್ಯರ್ಥಿ ಎಲ್‌.ಚಂದ್ರಶೇಖರ್‌  ಜೆಡಿಎಸ್‌ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ ಮಾತ್ರವಲ್ಲದೆ ಕಾಂಗ್ರೆಸ್‌ ಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next