Advertisement

ಗೋಡೆ ನಾರಾಯಣ ಹೆಗಡೆಗೆ ಕೆರೆಮನೆ ಪ್ರಶಸ್ತಿ ಘೋಷಣೆ

11:15 AM Nov 26, 2017 | |

ಹೊನ್ನಾವರ: ಹಿರಿಯ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆಯವರಿಗೆ ಪ್ರತಿಷ್ಠಿತ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಘೋಷಿಸಲಾಗಿದೆ. ಕಳೆದ ಐದು ವರ್ಷದಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಗೋಡೆ ನಾರಾಯಣ ಹೆಗಡೆಯವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

ಪ್ರಶಸ್ತಿ 15 ಸಾವಿರ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿಪತ್ರವನ್ನೊಳಗೊಂಡಿದೆ. ಜೊತೆಗೆ, ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟಿಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘಾವ ಧಿ ಮೇಳವಾದ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ,

ಹಾಸ್ಯಗಾರ, ಕರ್ಕಿ ಈ ಮೇಳಕ್ಕೆ ನೀಡಲಾಗಿದೆ. ಈ ಪ್ರಶಸ್ತಿ 25,000ರೂ. ನಗದನ್ನು ಒಳಗೊಂಡಿದೆ. ಹೊನ್ನಾವರ ತಾಲೂಕಿನ ಗುಣವಂತೆಯ ಯûಾಂಗಣದಲ್ಲಿ ಜನವರಿ 27 ರಿಂದ 31 ರವರೆಗೆ ನಡೆಯಲಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟೊತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next