Advertisement

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

10:49 PM Mar 26, 2024 | Team Udayavani |

ಮಂಡ್ಯ: ಮಾಜಿ ಸಚಿವ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ, ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್‌ ಪರಿಸ್ಥಿತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವ ರಾಯಸ್ವಾಮಿ, ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡಿದರು.

Advertisement

ನಗರದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕುಮಾರಸ್ವಾಮಿ ಅವರು ಪುಟ್ಟರಾಜು ಅವರನ್ನು ಅಭ್ಯರ್ಥಿ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಒಳ್ಳೆ ಹುಡುಗಿ ಇದ್ದಾಳೆ, ಈ ಬಾರಿ ನಾನೇ ಮದ್ವೆ ಆಗ್ತಿನಿ, ಪುಟ್ಟರಾಜು ನಿನಗೆ ಮುಂದೆ ಒಳ್ಳೆ ಹುಡುಗಿ ಹುಡುಕೋಣ ಎಂದಿದ್ದಾರೆ ಎಂದು ಟೀಕಿಸಿದರು.

ಪಾಪ ಆ ಪುಟ್ಟರಾಜು ಕೈಯಲ್ಲಿ ಸಭೆ ಮಾಡಿಸಿದರು. ಆತ ಎಲ್ಲ ದೇವಸ್ಥಾನಗಳನ್ನು ಸುತ್ತಿ ಬಂದ. ಆದರೆ ಈಗ ಹುಡುಗಿ ಚೆನ್ನಾಗಿದ್ದಾಳೆ ಎಂದು ನಾನೇ ಮದ್ವೆ ಆಗ್ತಿàನಿ ಎನ್ನುತ್ತಿದ್ದಾರೆ ಎಂದು ಛೇಡಿಸಿದರು.

ಕಳೆದ ಚುನಾವಣೆ ಸಂಸದೆ ಸುಮಲತಾ ಅವರನ್ನು ನಿಂದಿಸಿದರು. ಈಗ ಸಹೋ ದರಿ, ಅಕ್ಕ ಎನ್ನುತ್ತಿದ್ದಾರೆ. ಕಳೆದ ಚುನಾವಣೆ ಯಲ್ಲಿಯೇ ಈ ಮಾತು ಆಡಿದ್ದರೆ ಅಂಬರೀಷ್‌ ಅವರ ಆತ್ಮಕ್ಕೆ ಶಾಂತಿ ಸಿಗುತ್ತಿತ್ತು. ಸಹೋದರಿ ಅಲ್ಲವೇ?, ಅವರೇ ಗೆಲ್ಲಲಿ, ನನ್ನ ಮಗ ಗೆದ್ದರೂ ಒಂದೇ, ಅಕ್ಕ ಗೆದ್ದರೂ ಒಂದೇ ಎನ್ನಬಹುದಿತ್ತು ಎಂದರು. ನಾನು ಕಾಂಗ್ರೆಸ್‌ ಸೇರಿ ಹೇಗೋ ಬಚಾವಾದೆ. ಆದರೆ ಪುಟ್ಟರಾಜು ಪಾಪ ಅವನ ಕಥೆ ಈಗ ಏನಾಗಬೇಕು. ನೀವು ಇನ್ನೊಮ್ಮೆ ಮುಖ್ಯಮಂತ್ರಿ, ಪ್ರಧಾನಿ ಆಗಿ. ಆದರೆ ನಮ್ಮ ಜಿಲ್ಲೆಗೆ ನೀವು ಬರಬೇಡಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next