Advertisement

Gokak; ಓಮಾನ್‌ ನಲ್ಲಿ ರಸ್ತೆ ಅಪಘಾತದಲ್ಲಿ ರಾಜ್ಯದ ನಾಲ್ವರು ಸಾವು

04:08 PM Aug 30, 2024 | Team Udayavani |

ಬೆಳಗಾವಿ: ಓಮಾನ್‌ ದೇಶದ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ನಾಲ್ಕು ಜನ ಗೋಕಾಕ್ ನಿವಾಸಿಗಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

Advertisement

ಸಲಾಲಾದಿಂದ ಮುಸ್ಕತ್‌ ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಸಂಭವಿಸಿದ ಅಪಘಾತದಲ್ಲಿ ಈ ದುರಂತ ನಡೆದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಗೋಕಾಕ್ ನಗರದ ನಿವಾಸಿಗಳಾದ ಪವನ್‌ ಕುಮಾರ್ ಮಾಯಪ್ಪ ತಹಶೀಲ್ದಾರ, ಪೂಜಾ ಮಾಯಪ್ಪ ತಹಶೀಲ್ದಾರ, ವಿಜಯಾ ಮಾಯಪ್ಪ ತಹಶೀಲ್ದಾರ ಮತ್ತು ಅಳಿಯ ಅದಿಶೇಷ ಬಸವರಾಜ ಮೃತಪಟ್ಟಿದ್ದಾರೆ. ಅವರ ಶವವನ್ನು ಹೈಮಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೃತದೇಹಗಳನ್ನು ಭಾರತಕ್ಕೆ ತರಲು ಈಗಾಗಲೇ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರಿಗೆ ಭಾರತೀಯ ರಾಯಭಾರ ಕಚೇರಿಯಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಮನವಿ ಮಾಡಲಾಗಿದೆ ಎಂದು ಕಡಾಡಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next