Advertisement

ದಿನೇಶ್‌ ಭೇಟಿ ಮಾಡಿದ ಗೋಕಾಕ್‌ ಮುಖಂಡರು

11:11 PM Aug 06, 2019 | Lakshmi GovindaRaj |

ಬೆಂಗಳೂರು: ಅನರ್ಹತೆಗೊಂಡಿರುವ ಶಾಸಕರ ಕ್ಷೇತ್ರಗಳಾದ ಬೆಳಗಾವಿಯ ಗೋಕಾಕ್‌ ಹಾಗೂ ಅರಭಾವಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ ಉಪ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಿದರು. ರಮೇಶ್‌ ಜಾರಕಿಹೊಳಿ ಅವರು ಪಕ್ಷಕ್ಕೆ ದ್ರೋಹ ಮಾಡಿದ್ದು ಅವರಿಗೆ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ. ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದು ಅವಕಾಶ ಕೊಡಬೇಕೆಂದು ಮನವಿ ಮಾಡಿದರು.

Advertisement

ಕಾರ್ಯಕರ್ತರು ಹಾಗೂ ಮುಖಂಡರ ಬಳಿ ಮಾಹಿತಿ ಪಡೆದ ದಿನೇಶ್‌ ಗುಂಡೂರಾವ್‌, ಕಾಂಗ್ರೆಸ್‌ ಪಕ್ಷಕ್ಕೆ ಎರಡೂ ಕ್ಷೇತ್ರಗಳಲ್ಲಿ ಭದ್ರ ನೆಲೆಯಿದೆ. ಎರಡೂ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ನಾವು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದೇವೆ ಎಂದು ಹೇಳಿದರು. ಈ ಮಧ್ಯೆ, ಕಾರ್ಯಕರ್ತರು ಹಾಗೂ ಮುಖಂಡರು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಗೋಕಾಕ್‌ ಕ್ಷೇತ್ರಕ್ಕೆ ರಮೇಶ್‌ ಜಾರಕಿಹೊಳಿ ಸಹೋದರ ಲಖನ್‌ ಜಾರಕಿಹೊಳಿಗೆ ಟಿಕೆಟ್‌ ನೀಡಬಾರದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರೊಬ್ಬರಿಗೆ ನೀಡಬೇಕೆಂದು ಮನವಿ ಮಾಡಿದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next