Advertisement
ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, ಹತ್ತಾರು ಮನೆಗಳನ್ನು ನೆಲಸಮ ಮಾಡಲಾಗಿದೆ.
Related Articles
Advertisement
ತೆರವು ಕಾರ್ಯಾಚರಣೆಯಲ್ಲಿ ಬೈಲಹೊಂಗಲ ಡಿ.ಎಸ್.ಪಿ ಶಿವಾನಂದ ಕಟಗಿ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಘಟಪ್ರಭಾ ಸಿಪಿಐ ಶ್ರಿಶೈಲ ಬ್ಯಾಕೂಡ, ಮೂಡಲಗಿ ಪಿಎಸ್ಐ ಹಾಲಪ್ಪಾ ಬಾಲದಂಡಿ, ಪಿಎಸ್ಐ ಆರ್.ಎಸ್.ಖೋತ, ಮುಖ್ಯಾಧಿಕಾರಿ ಕೆ.ಬಿ.ಪಾಟೀಲ, ಧುಪದಾಳ ಗ್ರಾಮ ಲೆಕ್ಕಾಧಿಕಾರಿ ಎಂ.ಎಸ್.ಗಡಕರಿ, ನೀರಾವರಿ ಇಲಾಖೆಯ ಚೀಫ್ ಇಂಜಿನಿಯರ್ ಕಣಗಲಿ, ಹಾಗೂ ಸಿಬ್ಬಂದಿ ವರ್ಗವರು, ಮಹಿಳಾ ಹಾಗೂ ಪುರುಷ ಪೊಲೀಸ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
“ಅತಿಕ್ರಮಣ ತೆರವಿಗೆ ಮುಂದಾದ ಅಧಿಕಾರಿಗಳಿಗೆ ಅತಿಕ್ರಮಣಕಾರರಿಂದ ತೀವ್ರ ವಿರೋಧ ವ್ಯಕ್ತ ವಾಯಿತು, ಈಗಾಗಲೆ ಇಲ್ಲಿರುವ ಎಲ್ಲ ಅತಿಕ್ರಮಣಕಾರರಿಗೆ ಮುಂಚಿತವಾಗಿ ತೆರವುಗೊಳಿಸಲು ಸೂಚನೆ ನೀಡಿದ್ದರೂ ಸಹ ತೆರವು ಮಾಡದ ಕಾರಣ ಕೋರ್ಟ್ ಆದೇಶದಂತೆ ಅತೀಕ್ರಮಣ ತೆರವು ಮಾಡುವುದು ಅನಿವಾರ್ಯವಾಯಿತು”.– ಪ್ರಕಾಶ ಹೊಳೆಪ್ಪನವರ, ತಹಶೀಲ್ದಾರರು ಗೋಕಾಕ.