Advertisement

Gokarna: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

08:47 PM Sep 18, 2023 | Team Udayavani |

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರನ್ನು ಕಡಲ ತೀರ ಕಾಯುವ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ ಘಟನೆ ಗೋಕರ್ಣ ಸಮುದ್ರ ತೀರದಲ್ಲಿ ಸೋಮವಾರ  ನಡೆದಿದೆ.

Advertisement

ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಮುಳುಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಪ್ರವಾಸಿಗರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣ ಬೀಚ್ ನಲ್ಲಿ ನಡೆದಿದೆ.

ಋತುರಾಜ್(26), ಶ್ರೀಖಾಂಚು ಗುಪ್ತಾ(28), ಪ್ರಶಾಂತ ಚಂದ್ರಶೇಖರ್(28), ಆರುಷಿ ಬನ್ಸಾಲ್(27) ಎಂಬ ಯುವಕರನ್ನು ಲೈಫ್ ಗಾರ್ಡ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದ ಈ ಯುವಕರು ಬೆಂಗಳೂರಿನ‌ ಕಂಪನಿಯೊಂದರಲ್ಲಿ ಉದ್ಯೋಗಿಗಳಾಗಿದ್ದಾರೆ‌ .

ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕಿ ಯುವಕರು ಮುಳುಗುತ್ತಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿ ಪ್ರವಾಸಿಗರ ರಕ್ಷಣೆ ಮಾಡಿದರು.

Advertisement

ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಗೋಕರ್ಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಲ್ವರು ಯುವಕರು ಅಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next