Advertisement

ಮೂರೂವರೆ ತಿಂಗಳಲ್ಲಿ 21 ಕೆ.ಜಿ.ಗೂ ಅಧಿಕ ಜಪ್ತಿ;

12:35 AM Sep 29, 2021 | Team Udayavani |

ಮಂಗಳೂರು: ಕೋವಿಡ್‌ ಎರಡನೇ ಅಲೆ, ಲಾಕ್‌ಡೌನ್‌ ಬಳಿಕ ದುಬಾೖ-ಮಂಗಳೂರು ನಡುವೆ ನೇರ ವಿಮಾನ ಯಾನ ಪುನರಾರಂಭಗೊಂಡ ಅನಂತರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ ಪ್ರಕರಣ ಮತ್ತೆ ಹೆಚ್ಚಾಗಿದೆ.

Advertisement

ಸುಮಾರು ಒಂದು ತಿಂಗಳ ಅವಧಿಯಲ್ಲಿ ವಿಮಾನ ನಿಲ್ದಾಣದಲ್ಲಿ ಒಂದೂವರೆ ಕೆ.ಜಿ.ಗೂ ಅಧಿಕ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಒಂದು ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳಲ್ಲಿ ಹೆಚ್ಚಿನವರು ಕಾಸರಗೋಡಿನವರು. ಆಟಿಕೆ, ಶೂ, ಅಡುಗೆ ಸಾಮಗ್ರಿ, ಹೇರ್‌ಬ್ಯಾಂಡ್‌, ಗುದದ್ವಾರ, ಬಟ್ಟೆ ಮೊದಲಾದವುಗಳಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಅಕ್ರಮಕ್ಕೆ ಆಫ‌ರ್‌ !
ದುಬಾೖ ಮತ್ತು ಭಾರತದಲ್ಲಿರುವ ಕೆಲವು ಮಂದಿ ಸ್ಮಗ್ಲರ್‌ಗಳು ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಕೆಲವು ಪ್ರಯಾಣಿಕರನ್ನು ಬಳಸುತ್ತಿರುವ ಬಗ್ಗೆಯೂ ಅಧಿಕಾರಿಗಳು ಬಲವಾದ ಸಂಶಯ ವ್ಯಕ್ತಪಡಿಸಿದ್ದಾರೆ. ಇಂತಹ ಸ್ಮಗ್ಲರ್‌ಗಳು ಅಕ್ರಮ ಚಿನ್ನ ಸಾಗಾಟ ಮಾಡುವ ಪ್ರಯಾಣಿಕರಿಗೆ ಉಚಿತ ವಿಮಾನಯಾನ ಟಿಕೆಟ್‌, ಹಣದ ಆಫ‌ರ್‌ ನೀಡುತ್ತಾರೆ ಎನ್ನಲಾಗಿದೆ. ಇನ್ನು ಕೆಲವು ಮಂದಿ ಸ್ವತಃ ಅವರಾಗಿಯೇ ಚಿನ್ನದ ಆಸೆಗೆ ಬಿದ್ದು ಕಸ್ಟಮ್ಸ್‌ ಇಲಾಖೆಯ ಕೈಗೆ ಸಿಕ್ಕಿಬಿದ್ದು ಅಪಾಯ ತಂದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಬೂಸ್ಟರ್‌ ಡೋಸ್‌ ಪಡೆದುಕೊಂಡ ಅಧ್ಯಕ್ಷ ಬೈಡೆನ್‌

Advertisement

2 ತಂಡಗಳಿಂದ ತಪಾಸಣೆ
ಮಂಗಳೂರು ವಿಮಾನ ನಿಲ್ದಾಣಲ್ಲಿ ಕಸ್ಟಮ್ಸ್‌ ಇಲಾಖೆಯ ಒಟ್ಟು 20 ಅಧಿಕಾರಿ, ಸಿಬಂದಿಯನ್ನೊಳಗೊಂಡ 2 ತಂಡಗಳು ತಪಾಸಣೆ ನಡೆಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಚಿನ್ನ ಸಾಗಾಟಗಾರರು ಚಿನ್ನವನ್ನು ಬಚ್ಚಿಟ್ಟುಕೊಳ್ಳಲು ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅದನ್ನು ಕೂಡ ಇಲಾಖೆ ಪತ್ತೆ ಹಚ್ಚುತ್ತಿದೆ. ಅಕ್ರಮವಾಗಿ ಸಾಗಿಸಿದ ಚಿನ್ನದ ಮೌಲ್ಯ 20 ಲ.ರೂ.ಗಳಿಗಿಂತ ಅಧಿಕವಿದ್ದರೆ ಆರೋಪಿಗಳನ್ನು ಬಂಧಿಸಲಾಗುತ್ತದೆ. ಅದಕ್ಕಿಂತ ಕಡಿಮೆ ಇದ್ದರೆ ಪ್ರಕರಣ ದಾಖಲಿಸಿ ದಂಡ ವಿಧಿಸಿ ತನಿಖೆ ನಡೆಸಲಾಗುತ್ತದೆ. – ಇಮಾಮುದ್ದೀನ್‌ ಅಹಮ್ಮದ್‌,
ಕಸ್ಟಮ್ಸ್‌ ಆಯುಕ್ತರು, ಮಂಗಳೂರು

12 ಮಂದಿಯ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಹಿಂದಿನ ಎಲ್ಲ ವರ್ಷಗಳಿಗಿಂತಲೂ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. 2021ರ ಜನವರಿಯಿಂದ ಎ. 19ರ ವರೆಗೆ ಕೇವಲ ಮೂರೂವರೆ ತಿಂಗಳಲ್ಲಿ 21 ಕೆ.ಜಿ.ಗೂ ಅಧಿಕ ತೂಕದ ಹಾಗೂ 10 ಕೋ.ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ವರ್ಷ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next