Advertisement

Accused arrested: ಅಂಗಡಿಯಲ್ಲಿ ಚಿನ್ನದ ಸರ ಕೊರಳಿಗೆ ಹಾಕಿಕೊಂಡು ಪರಾರಿಯಾಗಿದ್ದವನ ಸೆರೆ

10:08 AM Sep 12, 2023 | Team Udayavani |

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಸರ ಕೊರಳಿಗೆ ಹಾಕಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.

Advertisement

ಯವಂತಪುರದ ಸುಬೇದಾರ್‌ಪಾಳ್ಯ ನಿವಾಸಿ ರೋಹಿತ್‌(24) ಬಂಧಿತ. ಆರೋಪಿಯಿಂದ 2.50 ಲಕ್ಷ ರೂ. ಮೌಲ್ಯದ 45 ಗ್ರಾಂ ತೂಕದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 1 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಆರೋಪಿ ವೃತ್ತಿಪರ ಕಳ್ಳನಾಗಿದ್ದು, ಈತನ ವಿರುದ್ಧ ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ ಸೇರಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಆರೋಪಿ ಐದು ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದು ಹೊರಬಂದು ಮತ್ತೆ ಅಪರಾಧ ಕೃತ್ಯ ಎಸಗಿದ್ದಾನೆ.

ಆರೋಪಿ ರೋಹಿತ್‌ ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ತೆರಳಿ 30 ಗ್ರಾಂ ತೂಕದ ಚಿನ್ನದ ಸರ ತೋರಿಸುವಂತೆ ಕೇಳಿದ್ದಾನೆ. ಅಂಗಡಿ ಸಿಬ್ಬಂದಿ ವಿವಿಧ ವಿನ್ಯಾಸದ ಸರಗಳನ್ನು ತೋರಿಸಿದ್ದಾರೆ. ಈ ಪೈಕಿ ಒಂದು ಸರ ಎತ್ತಿಕೊಂಡು ಕೊರಳಗೆ ಹಾಕಿಕೊಂಡು ಕನ್ನಡಿ ಮುಂದೆ ನಿಂತು ನೋಡಿಕೊಳ್ಳುವಂತೆ ಡ್ರಾಮಾ ಮಾಡಿದ್ದ ಆರೋಪಿ, ಸಿಬ್ಬಂದಿ ಗಮನ ಬೇರೆಡೆ ಸೆಳೆದು ಏಕಾಏಕಿ ಅಂಗಡಿಯಿಂದ ಪರಾರಿಯಾಗಿದ್ದ.

Advertisement

Udayavani is now on Telegram. Click here to join our channel and stay updated with the latest news.

Next