Advertisement

ಬಸ್ ಹತ್ತುವಾಗ  ವೃದ್ಧೆಯ 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ದೋಚಿ ಪರಾರಿ

11:48 AM Jun 22, 2022 | Team Udayavani |

ಗಂಗಾವತಿ: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ವೃದ್ಧೆಯೋರ್ವಳ 3ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ನಡೆದಿದೆ.

Advertisement

ತಾಲ್ಲೂಕಿನ ಬಾಪಿರೆಡ್ಡಿ ಕ್ಯಾಂಪ್ ನ ನಿವಾಸಿ ಕನಕರತ್ನ ಎಂಬ ವೃದ್ಧೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ಊರಿಗೆ ಬಸ್ ಹತ್ತುವ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ವೃದ್ಧೆಯ  ಕೊರಳಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ದೋಚಿದ್ದಾರೆ.

ಈ ಕುರಿತು ಕನಕರತ್ನಮ್ಮ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ

ಇತ್ತೀಚಿನ ವರ್ಷಗಳಲ್ಲಿ ಗಂಗಾವತಿ ನಗರದಲ್ಲಿ ಚಿನ್ನದ ಸರ ದೋಚುವ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಲ್ಲಿ ಸಿಸಿ ಕ್ಯಾಮೆರಾಗಳ ಮುಖಾಂತರ ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. ಅಮೂಲ್ಯ ವಸ್ತುಗಳೊಂದಿಗೆ ಒಂಟಿಯಾಗಿ ನಗರಕ್ಕೆ ಆಗಮಿಸುವ ವ್ಯಕ್ತಿಗಳನ್ನು ಗುರಿಯಾಗಿಸಿ, ಬಸ್  ಮತ್ತು ರೈಲು ನಿಲ್ದಾಣಗಳಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸುತ್ತಾರೆ. ಈ ಕುರಿತು ಜಾಗೃತವಾಗಿರುವಂತೆ ಹಲವು ಬಾರಿ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next