Advertisement

Theft: ಬಸ್‌ನಲ್ಲಿ ಮಹಿಳೆಯ 9 ಲಕ್ಷ ರೂ. ಚಿನ್ನಾಭರಣ ಕಳ್ಳತನ

10:33 AM Aug 19, 2024 | Team Udayavani |

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ದುಷ್ಕರ್ಮಿಗಳು ಮಹಿಳೆಯ ಬ್ಯಾಗ್‌ನಲ್ಲಿದ್ದ 9 ಲಕ್ಷ ರೂ. ಮೌಲ್ಯದ 154 ಗ್ರಾಂ ಚಿನ್ನಾಭರಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಬಸವನಗರದ ರಾಮರೆಡ್ಡಿ ಕಾಲೋನಿ ನಿವಾಸಿ ಎಸ್‌.ಎನ್‌. ಕಲ್ಪನಾ ಚಿನ್ನಾಭರಣ ಕಳೆದು ಕೊಂಡವರು. ಕಲ್ಪನಾ ನೀಡಿದ ದೂರಿನ ಮೇರೆಗೆ ಉಪ್ಪಾರ ಪೇಟೆ ಠಾಣೆ ಪೊಲೀಸರು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆ.15ರಂದು ಮೆಜೆಸ್ಟಿಕ್‌ನಿಂದ ಹಾಸನಕ್ಕೆ ಹೊರಡುವ ಕೆಎಸಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.

ಕಲ್ಪನಾ ಆ.15ರಂದ್ಗು ಮನೆಯಲ್ಲಿದ್ದ 154 ಗ್ರಾಂ ಚಿನ್ನಾಭರಣಗಳನ್ನು ತೆಗೆದುಕೊಂಡು ವ್ಯಾನಿಟಿ ಬ್ಯಾಗ್‌ನಲ್ಲಿ ಇರಿಸಿಕೊಂಡಿದ್ದಾರೆ. ಬಳಿಕ ಬಿಎಂಟಿಸಿ ಬಸ್‌ನಲ್ಲಿ ಮೆಜೆಸ್ಟಿಕ್‌ಗೆ ಬಂದಿದ್ದು, ನಂತರ ಹಾಸನಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ್ದಾರೆ. ಬಸ್‌ ಸ್ವಲ್ಪ ದೂರು ಚಲಿಸಿದ ಬಳಿಕ ವ್ಯಾನಿಟಿ ಬ್ಯಾಗ್‌ ನೋಡಿಕೊಂಡಾಗ ಜಿಪ್‌ ಕೊಂಚ ತೆರೆದಿರುವುದು ಕಂಡು ಬಂದಿದೆ. ಮಾರ್ಗ ಮಧ್ಯೆ ವ್ಯಾನಿಟಿ ಬ್ಯಾಗ್‌ ತೆರೆದು ನೋಡಿದಾಗ ಚಿನ್ನಾಭರಣ‌ ಇಲ್ಲದಿರುವುದು ಕಂಡು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next