Advertisement

2ಕೆಜಿ ವಜ್ರ, ಅರ್ಧ ಕೆಜಿ ಬೆಳ್ಳಿ, ಚಿನ್ನಾಭರಣ ಕದ್ದ ಆರೋಪಿ ಬಂಧನ

03:41 PM Oct 29, 2018 | |

ಬೆಂಗಳೂರು: ನಗರದ ಮಡಿವಾಳದ ಉದ್ಯಮಿ ಸತ್ಯಪ್ರಕಾಶ್ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಬಿಹಾರ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
 
ಬಿಹಾರದ ಮಧುಬನಿ ಜಿಲ್ಲೆಯ ಅಖಿಲೇಶ್ ಕುಮಾರ್ (21 ವರ್ಷ) ಬಂಧಿತ ಆರೋಪಿ. ಈತ ಈ ಹಿಂದೆ ಸತ್ಯ ಪ್ರಕಾಶ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಸುಮಾರು 90 ಲಕ್ಷ ಮೌಲ್ಯದ 2 ಕೆ.ಜಿ ವಜ್ರ ಮತ್ತು ಚಿನ್ನದ ಒಡವೆಗಳು, ಅರ್ಧ ಕೆ.ಜಿ ಬೆಳ್ಳಿ ಸಾಮಾನುಗಳು ಮತ್ತು ಬೆಳೆ ಬಾಳುವ ಸ್ಟೀಲ್ ಮತ್ತು ಚಿನ್ನದ ವಾಚ್ ಗಳನ್ನು ಈತ ಕಳ್ಳತನ ಮಾಡಿ ತನ್ನೂರಿಗೆ ಪರಾರಿಯಾಗಿದ್ದ. 

Advertisement

ಈ ಮೂಲಕ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಆಗ್ನೇಯ ವಿಭಾಗದ ಮಡಿವಾಳ ಪೊಲೀಸರು ಆರೋಪಿಯನ್ನು  ಬಿಹಾರದಲ್ಲಿ ಬಂಧಿಸಿ ಕರೆತಂದಿದ್ದಾರೆ. 

ಈ ಕಾರ್ಯಾಚರಣೆಯಲ್ಲಿ ಆಗ್ನೇಯ ವಿಭಾಗದ ಉಪ-ಪೊಲೀಸ್ ಕಮಿಷನರ್ ಡಾ.ಬೋರಲಿಂಗಯ್ಯರ ಮಾರ್ಗದರ್ಶನದಲ್ಲಿ, ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಜಿ.ಯು.ಸೋಮೇಗೌಡರ ನೇತೃತ್ವದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಭರತ್ ಬಿ, ಮತ್ತು ಸಬ್ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಹಾಗು ಸಿಬ್ಬಂದಿಗಳು ಭಾಗವಹಿಸಿದ್ದರು.  ಈ ಪ್ರಕರಣದ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಮತ್ತು ಅಪರ ಪೊಲೀಸ್ ಆಯುಕ್ತರು, ಪೂರ್ವ ಬೆಂಗಳೂರು ನಗರ ಅವರು ಪ್ರಶಂಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next