Advertisement

ಸುವರ್ಣ ತ್ರಿಭುಜ ಬೋಟ್‌ ಮುಳುಗಡೆ: ಪರಿಹಾರಕ್ಕೆ ಮನವಿ

11:39 PM Aug 21, 2019 | Team Udayavani |

ಬೆಂಗಳೂರು: ಸುವರ್ಣ ತ್ರಿಭುಜ ಬೋಟ್‌ ಮುಳುಗಡೆ ಸಂಬಂಧ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಪರಿಹಾರ ನೀಡುವ ಸಂಬಂಧ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲು ಕರಾವಳಿ ಭಾಗದ ಶಾಸಕರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಿಯೋಗ, ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಬೇಕು. ನಾಡ ದೋಣಿಗಳಿಗೆ ನೀಡುತ್ತಿರುವ 300 ಲೀ. ಡೀಸೆಲ್‌ ಸಬ್ಸಿಡಿ ಪ್ರಮಾಣವನ್ನು 400 ಲೀ.ಗೆ ಏರಿಕೆ ಮಾಡಬೇಕು ಎಂದು ಕೋರಿಕೆ ಸಲ್ಲಿಸಿದರು.

ಸಭೆಯ ನಂತರ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಮೆಂಡನ್‌ ಸೇರಿದಂತೆ ನಮ್ಮ ಭಾಗದ ಶಾಸಕರ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದಾರೆ. ಬೋಟ್‌ನ ಮೇಲೆ 20 ಲಕ್ಷ ರೂ.ಸಾಲ ಇದ್ದು ಅದನ್ನು ರಾಜ್ಯ ಸರ್ಕಾರದಿಂದಲೇ ಭರಿಸುವಂತೆಯೂ ಮನವಿ ಮಾಡಿದ್ದೇವೆ. ಅದಕ್ಕೂ ಒಪ್ಪಿದ್ದಾರೆ ಎಂದರು. ನಾಡದೋಣಿಗೆ ಡೀಸೆಲ್‌ಗೆ 300 ಲೀಟರ್‌ಗೆ ಸಬ್ಸಿಡಿ ನೀಡಲಾಗುತ್ತಿತ್ತು. ಇದೀಗ ಆ ಪ್ರಮಾಣ 400 ಲೀಟರ್‌ಗೆ ಏರಿಸುವಂತೆ ಮನವಿ ಮಾಡಲಾಗಿದ್ದು ಅದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next