Advertisement

ಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ,ಪ್ರಧಾನ ಮಂತ್ರಿಗೆ ಆಹ್ವಾನ

10:51 AM Jun 03, 2017 | Team Udayavani |

ಬೆಂಗಳೂರು: 2018 ಫೆಬ್ರವರಿಯಲ್ಲಿ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಗೊಮಟೇಶ್ವರ ಮಹಾಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗು ಪ್ರಧಾನಿಯವರನ್ನು ಅಹ್ವಾನಿಸಲಾಗುತ್ತಿದೆ ಎಂದು ಮಹಾಮಸ್ತಕಾಭಿಷೇಕ ಮಹೋತ್ಸವ ಸಮಿತಿ ಕಾರ್ಯಾಧ್ಯಕ್ಷ ಎಸ್‌.ಜಿತೇಂದ್ರ ಕುಮಾರ್‌ ತಿಳಿಸಿದ್ದಾರೆ. 

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ, ಪ್ರಧಾನಮಂತ್ರಿ ಮೋದಿಯವರನ್ನು ಆಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.

ನಾಳೆ ವರ್ಧಮಾನ ಸಾಗರರ ಪುರ ಪ್ರವೇಶ: 2 ಮಹಾ ಮಸ್ತಕಾಭಿಷೇಕದ ನೇತೃತ್ವ ವಹಿಸಿದ್ದ ಮಧ್ಯಪ್ರದೇಶದ ಇಂದೋರು ಸಮೀಪದ ಸಿದ್ಧವರಕೂಟದ ಆಚಾರ್ಯ ಶ್ರೀ ವರ್ಧಮಾನ ಸಾಗರ ಮಹಾರಾಜರು ಮೂರನೇ ಬಾರಿ ಮಹಾಮಸ್ತಕಾಭಿಷೇಕದ ನೇತೃತ್ವ ವಹಿಸುತ್ತಿದ್ದು, 1,500 ಕಿಮೀ ಪಾದಯಾತ್ರೆ ಮೂಲಕ ಆಗಮಿಸಿರುವ ಅವರನ್ನು ಜೂ.4ರಂದು ಪರಪ್ರವೇಶ ಮಾಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next