Advertisement

ದಲಿತ ಯುವಕನ ಮೇಲೆ ದೌರ್ಜನ್ಯ ಪ್ರಕರಣ : ಗೋಣಿಬೀಡು ಪಿಎಸ್ ಐ ಅರ್ಜುನ್ ಅಮಾನತು

11:37 PM May 23, 2021 | Team Udayavani |

ಚಿಕ್ಕಮಗಳೂರು; ಮೂಡಿಗೆರೆ ತಾಲ್ಲೂಕು ಗೋಣಿಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಕಿರುಗುಂದ ಪರಿಶಿಷ್ಟ ಜಾತಿ ಯುವಕನ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಪೋಲಿಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ, ಸದ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

Advertisement

ಕಿರಗುಂದ ಗ್ರಾಮದ ಪರಿಶಿಷ್ಟ ಜಾತಿ ಯುವಕ ಪುನೀತ್ ಎಂಬುವನನ್ನು ಮೇ 10 ರಂದು ಯಾವುದೇ ದೂರು ದಾಖಲಿಸಿಕೊಳ್ಳದೆ. ಪೋಲಿಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪಿಎಸ್ ಐ ಅರ್ಜುನ್, ಯುವಕ ಕುಡಿಯಲು ನೀರು ಕೇಳಿದಾಗ ಮತ್ತೋಬ್ಬ ಆರೋಪಿಯ ಮೂತ್ರ ಕುಡಿಸಿದ್ದಾರೆ. ಮತ್ತು ನಕ್ಕಿದ್ದಾರೆ ಎಂದು ಪರಿಶಿಷ್ಟ ಜಾತಿ ಯುವಕ ಪುನೀತ್ ಆರೋಪಿಸಿ ಮೇ.22 ರಂದು ಗೋಣಿಬೀಡು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ :ಎಲ್ಲ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ಆದೇಶ

ಈ ಕುರಿತು ದೂರು ದಾಖಲಿಸಿಕೊಂಡ ಪೋಲಿಸರು ಪಿಎಸ್ಐ ಅರ್ಜುನ್ ಅವರನ್ನು ದಕ್ಷಿಣ ವಲಯದ ಐಜಿಯವರ ಮಾರ್ಗದರ್ಶನ ದಂತೆ ಅರ್ಜುನ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಿ ಅಮಾನತ್ತು ಗೊಳಿಸಿದ್ದಾರೆ.

ಹಾಗೂ ಈ ಪ್ರಕರಣವನ್ನು ಪುತ್ತೂರು ಡಿವೈಎಸ್ ಪಿ ನೇತ್ರತ್ವದಲ್ಲಿ ಇಲಖೆ ತನಿಖೆಗೆ ಒಪ್ಪಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next