Advertisement

ಮೋದಿ ನೇತೃತ್ವದಲ್ಲಿ ಉತ್ತಮ ಆಡಳಿತ

07:41 PM Apr 04, 2021 | Girisha |

ತಾಳಿಕೋಟೆ: ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ದೇಶದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತ, ಒಳ್ಳೆಯ ಆಡಳಿತ ನೀಡುತ್ತಾ ಸಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ(ನಡಹಳ್ಳಿ) ಹೇಳಿದರು. ಪಟ್ಟಣದ ವಿಠ್ಠಲ ಮಂದಿರ ಸಭಾಭವನದಲ್ಲಿ ಶನಿವಾರ ಬಿಜೆಪಿಯಿಂದ ಆಯೋಜಿಸಲಾದ ಮುದ್ದೇಬಿಹಾಳ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ, ರಾಜಕೀಯದಲ್ಲಿ ಸ್ಥಾನಮಾನ ಸಿಕ್ಕಿದೆ ಎಂಬ ಗರ್ವ ಬೇಡ. ಆ ಗೆಲುವಿನ ಹಿಂದೆ ಕಾರ್ಯಕರ್ತರ ಶ್ರಮ ಅಡಗಿರುತ್ತದೆ. ಆ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌. ಪಾಟೀಲ(ಕೂಚಬಾಳ) ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಪರಶುರಾಮ ಪವಾರ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಚಂದ್ರಶೇಖರ ಕವಟಗಿ, ಸಂಗನಗೌಡ ಚಿಕ್ಕೊಂಡ, ತಾಪಂ ಅಧ್ಯಕ್ಷ ರಾಜುಗೌಡ ಕೊಳೂರ, ಪ್ರಭು ಕಡಿ, ನಗರ ಘಟಕ ಅಧ್ಯಕ್ಷ ರಾಘವೇಂದ್ರ ಚವ್ಹಾಣ, ಪುರಸಭಾ ಅಧ್ಯಕ್ಷ ಸಂಗಮೇಶ ಇಂಗಳಗಿ, ಕಾಶಿಬಾಯಿ ರಾಂಪೂರ, ಎಸ್‌.ಎನ್‌. ಡಿಸಲೆ, ಎಂ.ಡಿ. ಕುಂಭಾರ, ಪ್ರಭುಗೌಡ ಬಿರಾದಾರ ಮೊದಲಾದವರು ಇದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ ನಿರೂಪಿಸಿದರು. ಕಾಶಿನಾಥ ಅರಳಿಚಂಡಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next