Advertisement

ಜೆಡಿಎಸ್‌-ಕಾಂಗ್ರೆಸ್‌ ನಡುವೆಯಿದೆ ಉತ್ತಮ ಬೀಗತನ

01:43 AM Mar 09, 2019 | Team Udayavani |

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಒಳ್ಳೆಯ ಬೀಗತನ ಆಗಲಿದೆ. ನಿರೀಕ್ಷೆಗಿಂತ ಹೆಚ್ಚು ಸ್ಥಾನ ನಮ್ಮದಾಗಲಿದೆ ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಎನ್‌.ಎಚ್‌.ಕೋನರೆಡ್ಡಿ ಹೇಳಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರು ಏನೇ ಮಾತನಾಡಲಿ, ಮೈತ್ರಿ ಸರಕಾರ ಹೊಂದಾಣಿಕೆಯಿಂದ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ. ಸ್ಥಾನ ಹಂಚಿಕೆ ಸಂಬಂಧ ಪಕ್ಷದ ವರಿಷ್ಠ ದೇವೇಗೌಡರ ಜೊತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾತನಾಡಿದ್ದಾರೆ. ಎಲ್ಲ ಗೊಂದಲ ಬಗೆಹರಿದಿದೆ. ಚುನಾವಣೆಯಲ್ಲಿ ಒಳ್ಳೆಯ ಬೀಗತನ ಆಗಲಿದೆ ಎಂದು ಮಾರ್ಮಿಕವಾಗಿ ಹೇಳಿದರು.

“ಉತ್ತರ ಕರ್ನಾಟಕದಲ್ಲಿ ಬೀದರ್‌,ವಿಜಯಪುರ, ರಾಯಚೂರು, ಉತ್ತರ ಕನ್ನಡ ಕ್ಷೇತ್ರಗಳನ್ನು ಜೆಡಿಎಸ್‌ಗೆ ನೀಡುವಂತೆ ಕೇಳಲಾಗಿದೆ. ಇದರ ಜೊತೆಗೆ, ಧಾರವಾಡ ಕ್ಷೇತ್ರದ ಬಗ್ಗೆಯೂ ಬೇಡಿಕೆ ಇಡಲಾಗಿದೆ. ನಮ್ಮ ಮನವಿಗೆ ಒಪ್ಪಿ, ಜೆಡಿಎಸ್‌ಗೆ ಧಾರವಾಡ ನೀಡಿದರೆ ನಾನು ಸ್ಪರ್ಧೆ ಮಾಡುತ್ತೇನೆ. ಇದನ್ನು ಪಕ್ಷದ ವರಿಷ್ಠರು ಸಹ ಈಗಾಗಲೇ ಸ್ಪಷ್ಟಪಡಿಸಿದ್ದಾರೆ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next