Advertisement

ಬಿಜೆಪಿಯವರಿಗೆ ಶುಭವಾಗಲಿ: ಪಾಟೀಲ

11:24 PM Feb 03, 2020 | Lakshmi GovindaRaj |

ಹುಬ್ಬಳ್ಳಿ: ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ನಂತರ ಸಾಕಷ್ಟು ಗೊಂದಲ, ಸಮಸ್ಯೆ ಉಂಟಾಗಲಿದೆ ಎಂದು ಈಗಾಗಲೇ ಹೇಳಿದ್ದೇನೆ. ಅವರಿಗೆ ಶುಭವಾಗಲಿ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು. ಸುದ್ದಿ ಗಾರರ ಜತೆ ಮಾತನಾಡಿ, ಫೆ.6ರಂದು ಸಂಪುಟ ವಿಸ್ತರಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಆ ನಂತರ ಏನಾಗುತ್ತದೆ ನೋಡೋಣ.

Advertisement

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಚೆಂಡು ಪಕ್ಷದ ಹೈಕಮಾಂಡ್‌ ಅಂಗಳದಲ್ಲಿದೆ. ಸೋನಿಯಾ ಗಾಂಧಿ ಅವರು ಆದಷ್ಟು ಬೇಗ ನಿರ್ಧಾರ ಕೈಗೊಳ್ಳುತ್ತಾರೆ. ಮಧುಸೂಧನ ಮಿಸ್ತ್ರಿ ಸೇರಿ ಕೇಂದ್ರದ ಮಾಜಿ ಸಚಿವರು ನಮ್ಮ ಅಭಿಪ್ರಾಯ ಪಡೆದಿದ್ದಾರೆ. ಸುಮಾರು 60 ಹಿರಿಯ ಕಾಂಗ್ರೆಸ್ಸಿ ಗರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್‌ಗೆ ತಿಳಿಸಿದ್ದಾರೆ. ಶೀಘ್ರವೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next