Advertisement

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ

06:20 AM May 21, 2020 | mahesh |

ಬೆಳ್ತಂಗಡಿ/ ಮಂಗಳೂರು: ತಾಲೂಕಿನೆಲ್ಲೆಡೆ ಬುಧವಾರ ಸಂಜೆ ಉತ್ತಮ ಮಳೆಯಾಗಿದೆ. ಮುಂಡಾಜೆ, ಕಲ್ಮಂಜ, ಕನ್ಯಾಡಿ ಗುರಿಪ್ಪಳ್ಳ ಮೊದಲಾದ ಗ್ರಾಮಗಳಲ್ಲೂ ಉತ್ತಮ ಮಳೆಯಾಯಿತು. ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಚಂಡಮಾರುತ ಪರಿಣಾಮದಿಂದ ಮಳೆ ತೀವ್ರತೆ ಹೆಚ್ಚಾಗಿದೆ. ಇತ್ತ ನದಿ ನೀರಿನ ಹೆಚ್ಚಳದಿಂದ ಈ ಬಾರಿ ಬೇಸಗೆಯಲ್ಲಿ ನೀರಿನ ಕೊರತೆ ನೀಗಿದಂತಾಗಿದೆ.

Advertisement

ಇನ್ನೂ 2 ದಿನ ಮಳೆ ಸಾಧ್ಯತೆ
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ “ಅಂಫಾನ್‌’ ಚಂಡಮಾರುತ ಬುಧವಾರ ಪಶ್ಚಿಮ ಬಂಗಾಲ ಮತ್ತು ಬಾಂಗ್ಲಾ ತೀರಕ್ಕೆ ಅಪ್ಪಳಿಸಿದ್ದು, ಮುಂದಿನ ದಿನಗಳಲ್ಲಿ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯ ಕರಾವಳಿ ತೀರಕ್ಕೆ ಅಷ್ಟೊಂದು ಪ್ರಭಾವ ಬೀರದು. ಆದರೆ ಅರಬಿ ಸಮುದ್ರದಲ್ಲಿಯೂ ನಿಮ್ನ ಒತ್ತಡ ನಿರ್ಮಾಣವಾಗಿದ್ದು, ಅವೆರಡರ ಪರಿಣಾಮ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಪಣಂಬೂರಿನಲ್ಲಿ ಬುಧವಾರ 34.7 ಡಿ.ಸೆ. ಗರಿಷ್ಠ ಮತ್ತು 25.7 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next