Advertisement
ಇನ್ನೂ 2 ದಿನ ಮಳೆ ಸಾಧ್ಯತೆಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾದ “ಅಂಫಾನ್’ ಚಂಡಮಾರುತ ಬುಧವಾರ ಪಶ್ಚಿಮ ಬಂಗಾಲ ಮತ್ತು ಬಾಂಗ್ಲಾ ತೀರಕ್ಕೆ ಅಪ್ಪಳಿಸಿದ್ದು, ಮುಂದಿನ ದಿನಗಳಲ್ಲಿ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯ ಕರಾವಳಿ ತೀರಕ್ಕೆ ಅಷ್ಟೊಂದು ಪ್ರಭಾವ ಬೀರದು. ಆದರೆ ಅರಬಿ ಸಮುದ್ರದಲ್ಲಿಯೂ ನಿಮ್ನ ಒತ್ತಡ ನಿರ್ಮಾಣವಾಗಿದ್ದು, ಅವೆರಡರ ಪರಿಣಾಮ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಪಣಂಬೂರಿನಲ್ಲಿ ಬುಧವಾರ 34.7 ಡಿ.ಸೆ. ಗರಿಷ್ಠ ಮತ್ತು 25.7 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.