Advertisement

ಉತ್ತಮ ಮಳೆ; ಇನ್ನೂ ಎರಡು ದಿನ ಸಾಧ್ಯತೆ

12:06 AM May 26, 2019 | Team Udayavani |

ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ತಡರಾತ್ರಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.

Advertisement

ಮಂಗಳೂರು, ಸುರತ್ಕಲ್‌, ವಿಟ್ಲ, ಕಿನ್ನಿಗೋಳಿ, ಮೂಲ್ಕಿ, ಬೆಳ್ತಂಗಡಿ, ಗುರುವಾಯನಕೆರೆ, ಉಜಿರೆ, ಧರ್ಮಸ್ಥಳ, ಉಪ್ಪಿನಂಗಡಿ, ಪುತ್ತೂರು, ವೇಣೂರು, ಬಿ.ಸಿ. ರೋಡ್‌ ಸೇರಿದಂತೆ ಅನೇಕ ಕಡೆ ಉತ್ತಮ ಮಳೆಯಾಗಿದೆ. ರಾತ್ರಿ ವೇಳೆ ಮಳೆಯ ಜತೆಗೆ ಗುಡುಗು, ಸಿಡಿಲು ಹೆಚ್ಚಾಗಿತ್ತು. ಶನಿವಾರ ಸುಬ್ರಹ್ಮಣ್ಯ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಪಡುಬಿದ್ರಿ, ಕಾರ್ಕಳ, ಕುಂದಾಪುರದಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಬ್ರಹ್ಮಾವರ ಪರಿಸರದಲ್ಲಿಯೂ ಮಳೆಯಾಯಿತು.

Advertisement

Udayavani is now on Telegram. Click here to join our channel and stay updated with the latest news.

Next