Advertisement

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರ ಆರಂಭ

06:15 AM Oct 09, 2018 | Team Udayavani |

ಸಕಲೇಶಪುರ: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರ ಆರಂಭಗೊಂಡಿದೆ. ಆದರೆ ಪ್ಯಾಸೆಂಜರ್‌
ರೈಲುಗಳ ಸಂಚಾರ ಪೂರ್ವ ನಿಗದಿಯಂತೆ ಈ ತಿಂಗಳ 10ರಿಂದ ಪುನಾರಂಭವಾಗುವುದು ಅನುಮಾನ.

Advertisement

ಕಳೆದ ಆಗಸ್ಟ್‌ ಮೊದಲ ಹಾಗೂ ಎರಡನೇ ವಾರದಲ್ಲಿ ಸುರಿದ ಮಹಾಮಳೆಯಿಂದ ಪಶ್ಚಿಮಘಟ್ಟದ ಬೆಟ್ಟ, ಗುಡ್ಡ, ಮಳೆಕಾಡು,
ಕಂದಕಗಳ ನಡುವೆ ಹಾದು ಹೋಗಿರುವ ಸಕಲೇಶಪುರ- ಸುಬ್ರಹ್ಮಣ್ಯ ನಡುವಿನ ರೈಲು ಹಳಿಗಳ ಮೇಲೆ ಬೆಟ್ಟಗಳು ಕುಸಿದು ಬಿದ್ದಿದ್ದವು.

ಸುಮಾರು 2 ಲಕ್ಷ ಕ್ಯೂಬಿಕ್‌ ಮೀಟರ್‌ಗೂ ಹೆಚ್ಚು ಪ್ರಮಾಣದ ಮಣ್ಣು, ಭಾರೀ ಗಾತ್ರದ ಬಂಡೆಗಳು, ಮರ, ಗಿಡಗಳು ರೈಲು ಹಳಿಗಳನ್ನು ಮುಚ್ಚಿಕೊಂಡಿದ್ದವು. ಕಡಗರವಳ್ಳಿಯಿಂದ ಎಡಕುಮೇರಿ, ಶಿರಿವಾಗಿಲು ಹಾಗೂ ಸುಬ್ರಹ್ಮಣ್ಯದವರೆಗೆ 64 ಕಡೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿತ್ತು. ಬೆಟ್ಟದಿಂದ ಉರುಳಿ ಬಿದ್ದ ಬಂಡೆಗಳಿಗೆ ರೈಲ್ವೆ ಹಳಿಗಳೇ ತುಂಡಾಗಿ ಕೊಚ್ಚಿಹೋಗಿದ್ದವು. ಈ ಹಿನ್ನೆಲೆಯಲ್ಲಿ ರೈಲ್ವೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಶಿರಿವಾಗಿಲು ಸಮೀಪ ಹೆಚ್ಚಿನ ಅನಾಹುತ ಸಂಭವಿಸಿದ್ದರಿಂದ ದುರಸ್ತಿ ಕಾಮಗಾರಿ ಮುಗಿಯುವುದು ತುಸು ವಿಳಂಬವಾಗಿತ್ತು.
ಸದ್ಯ ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು,ಬಂಡೆಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ರೈಲ್ವೆ ಹಳಿಗಳನ್ನು ಕೂಡ ದುರಸ್ತಿ
ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಮಂಗಳವಾರದಿಂದ ಗೂಡ್ಸ್‌ ರೈಲುಗಳಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

ಒಂದು ವಾರದಿಂದ ನಿರಂತರವಾಗಿ ಈ ಮಾರ್ಗದಲ್ಲಿ ಗೂಡ್ಸ್‌ ರೈಲುಗಳು ಸಂಚರಿಸುತ್ತಿದ್ದು ಅ. 10ರಿಂದ ಪ್ರಯಾಣಿಕರ
ರೈಲು ಸಂಚರಿಸಬಹುದೆಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಇದೀಗ ರೈಲು ಓಡಿಸುವ ಬಗ್ಗೆ ಉನ್ನತ ಅಧಿಕಾರಿಗಳಿಂದ ಯಾವುದೇ ಪ್ರಕಟಣೆ ಬಂದಿಲ್ಲವೆಂದು ಸಕಲೇಶಪುರ ರೈಲು ನಿಲ್ದಾಣದ ಅಧಿಕಾರಿಗಳು ಹೇಳಿದ್ದು ಇದರಿಂದಾಗಿ ಪೂರ್ವ ನಿಗದಿಯಂತೆ ರೈಲು ಸಂಚಾರ ಪುನಾರಂಭವಾಗುವುದು ಅನುಮಾನವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next