Advertisement

ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

11:39 AM Jun 05, 2023 | Team Udayavani |

ಹೊಸದಿಲ್ಲಿ: ಒಡಿಶಾದ ಬಾಲಸೋರ್‌ನಲ್ಲಿ 275 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ ಮೂರು ದಿನಗಳ ನಂತರ, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿದ್ದ ಮತ್ತೊಂದು ರೈಲು ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.

Advertisement

ಬಾಲಸೋರ್ ಘಟನಾ ಸ್ಥಳದಿಂದ ಸಮಾರು 500 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್‌ ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಲೈನ್, ವ್ಯಾಗನ್‌ಗಳು ಮತ್ತು ಲೊಕೊಮೊಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:Ramanagara: ಟೋಲ್ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

ಕೆಲವು ಬೋಗಿಗಳು ಮಾತ್ರ ಹಳಿತಪ್ಪಿವೆ ಮತ್ತು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next