Advertisement

ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಬಿಜೆಪಿಗೆ ಸೇರ್ಪಡೆ

06:10 AM Feb 04, 2018 | Team Udayavani |

ಬೆಂಗಳೂರು: ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಶನಿವಾರ ಬಿಜೆಪಿಗೆ ಸೇರ್ಪಡೆಯಾದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಗೂಳಿಹಟ್ಟಿ ಶೇಖರ್‌ ಅವರಿಗೆ ಬಿಜೆಪಿ ಧ್ವಜನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

Advertisement

ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ, ಮಾಜಿ ಸಚಿವರಾದ ಬಸವರಾಜ ಬೊಮ್ಮಾಯಿ, ಜಯಪ್ರಕಾಶ್‌ ಹೆಗ್ಡೆ, ಚಿತ್ರದುರ್ಗದ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್‌, ಮಾಜಿ ಸಂಸದ ಜಿ.ಎಸ್‌.ಬಸವರಾಜ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ  ರವಿಕುಮಾರ್‌, ಮುಖಂಡ ಲೋಕೇಶ್ವರ್‌ ಉಪಸ್ಥಿತರಿದ್ದರು.

ಗೂಳಿಹಟ್ಟಿ ಶೇಖರ್‌ ಈ ಹಿಂದೆ ಹೊಸದುರ್ಗ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿ ಸಚಿವರಾಗಿದ್ದರು. ನಂತರ  ಯಡಿಯೂರಪ್ಪ ವಿರುದ್ಧ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದ ಪಕ್ಷೇತರರ ಶಾಸಕರು ತಿರುಗಿಬಿದ್ದಾಗ ಗೂಳಿಹಟ್ಟಿ ಶೇಖರ್‌ ಸಹ ಅವರ ಜತೆಗೂಡಿದ್ದರು. ಆ ಸಂದರ್ಭದಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ನಡೆದಾಗ ಬಟ್ಟೆ ಹರಿದುಕೊಂಡ ಪ್ರಸಂಗವೂ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next