Advertisement

ಗುಂಡ್ಲುಪೇಟೆ: ಗೋಪಾಲಸ್ವಾಮಿ ಬೆಟ್ಟದಲ್ಲಿ ಇ- ಹುಂಡಿ ಸೇವೆಗೆ ಚಾಲನೆ

11:57 AM Aug 27, 2022 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಪ್ರಸಿದ್ಧ‌ ಧಾರ್ಮಿಕ ಸ್ಥಳ ಹಿಮವದ್ ಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ತಹಸೀಲ್ದಾರ್ ಸಿ.ಜಿ.ರವಿಶಂಕರ್ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ತಹಸೀಲ್ದಾರ್ ಸಿ.ಜಿ.ರವಿಶಂಕರ್, ದೇಶವೇ ಡಿಜಿಟಲೀಕರಣವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ದೇವರಿಗೆ ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆಯನ್ನು ಎಸ್ ಬಿಐ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ ಎಂದರು.

ಭಕ್ತಾದಿಗಳು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಇ-ಹುಂಡಿಗೆ ಹಣ ಸಲ್ಲಿಸಬಹುದಾಗಿದೆ. ಭಕ್ತರು ತಾವು ಕುಳಿತ ಸ್ಥಳದಲ್ಲೆ ದೇವಸ್ಥಾನಕ್ಕೆ ಹಣ ಜಮಾ ಮಾಡಲು ನೆರವಾಗುವ ಉದ್ದೇಶದಿಂದ ಇ-ಹುಂಡಿ ಆರಂಭ ಮಾಡಲಾಗಿದ್ದು, ಇನ್ನು ಮುಂದೆ ಜನರು ದೇವಸ್ಥಾನದ ಗೋಲಕಕ್ಕೆ ಹಣ ನೀಡುವ ಬದಲು ಇ-ಹುಂಡಿಗೆ ಗೂಗಲ್ ಫೇ, ಫೋನ್ ಫೇ, ಭೀಮ್ ಆ್ಯಪ್, ಪೇಟಿಎಂ ಮೂಲಕ ಹಣ ಹಾಕಬಹುದು ಎಂದು ತಿಳಿಸಿದರು.

ಈ ವೇಳೆ ಎಸ್‌ಬಿಐ ವಿಭಾಗೀಯ ವ್ಯವಸ್ಥಾಪಕ ಬಿನ್ನಿ ಮಾಧೂ, ಮುಖ್ಯ ವ್ಯವಸ್ಥಾಪಕ ವೆಂಕಟರಾವ್, ಎಸ್‌ಬಿಐ ಗುಂಡ್ಲುಪೇಟೆ ಶಾಖೆಯ ವ್ಯವಸ್ಥಾಪಕ ಜಿ.ಬಿ.ರವೀಂದ್ರ, ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ಗೋಪಾಲಕೃಷ್ಣ ಭಟ್ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next