Advertisement

ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಡಾ.ಪ್ರಸನ್ನ ವಿಧಿವಶ

02:49 PM Jul 23, 2022 | Team Udayavani |

ಕೊರಟಗೆರೆ : ಗೊರವನಹಳ್ಳಿಯ ಶ್ರೀ ಮಹಾಲಕ್ಷ್ಮೀ ದೇವಾಲಯದ ಪ್ರಧಾನ ಆರ್ಚಕರಾಗಿದ್ದ ಡಾ.ಹೆಚ್.ಸಿ .ಪ್ರಸನ್ನಕುಮಾರ್ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

Advertisement

ಗೊರವನಹಳ್ಳಿಯ ಮಹಾಲಕ್ಷ್ಮೀ ಮಾತೆಯ ಪ್ರ ಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು ಮತ್ತೆ ಕಮಲಮ್ಮನವರ ಸಾಕು ಮಗನಾಗಿದ್ದ ಪ್ರಸನ್ನ ಕುಮಾರ್ ಕಳೆದ ಒಂದೂವರೆ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಕುಟುಂಬಸ್ಥರು ಹಾಗೂ ಭಕ್ತಾದಿಗಳಲ್ಲಿ ಶೋಕ ಮಡುಗಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಗೊರಗುಂಟೆ ಪಾಳ್ಯದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರಸನ್ನಕುಮಾರ್ ದೈವಾಧೀನರಾದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 2ಗಂಟೆಯಿಂದ ನಾಳೆ ಮಧ್ಯಾಹ್ನ 2ಗಂಟೆಯವರೆಗೆ ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ ನೀಡಲಾಗುತ್ತಿಲ್ಲ.

ನಾಳೆ ಬೆಳಗ್ಗೆ ಕಮಲ ಪ್ರಿಯ ಪ್ಯಾಲೆಸ್ ಆವರಣದಲ್ಲಿ ದೈವಾಧೀನರಾದ ಪ್ರಸನ್ನಕುಮಾರ್ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ. ಭಕ್ತಾದಿಗಳು ಸಹಕರಿಸಬೇಕು ಎಂದು ಕೇಳಿ ಕೊಳ್ಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next